23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ : ಪಾಕ ಶಾಲೆ ಉದ್ಘಾಟನೆ

ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಪಾಕ ಶಾಲೆಯನ್ನು ಜಗದೀಶ್ ಪಡಿವಾಳ್ ಮಾಪಲಾಡಿ ಬೆಂಗಳೂರು ಉದ್ಘಾಟಿಸಿದರು. ,
ಎ.೩ರಂದು ತಂತ್ರಿಗಳನ್ನು ಪೂರ್ಣಕುಂಭದೊಂದಿಗೆ ಕ್ಷೇತ್ರಕ್ಕೆ ಸ್ವಾಗತಿಸಲಾಯಿತು.
ಬಳಿಕ ಆಚಾರ್ಯವರಣ, ದೇವನಾಂದೀ, ತೋರಣ ಮೂಹೂರ್ತ, ಉಗ್ರಾಣ ಮುಹೂರ್ತ, ಭೂ ಶುದ್ದಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.
. ಎ.೪ರಂದು ಬೆಳಗ್ಗೆ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಿಂದ ಮೇಲಂತಬೆಟ್ಟು ದೇವಸ್ಥಾನಕ್ಕೆ ಭಕ್ತರಿಂದ ಹೊರಕಾಣಿಕೆ ಹಾಗೂ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಗೊಳ್ಳಲಿರುವ ನೂತನ ಗಣಪತಿ ವಿಗ್ರಹ ಹಾಗೂ ಶ್ರೀ ನಾರಾಯಣ ಗುರುಗಳ ಪೀಠದ ಮೆರವಣಿಗೆ ನಡೆಯಲಿದೆ.
ಪಾಕ ಶಾಲೆ ಉದ್ಘಾಟನೆ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎಂ ದಯಾಕರ್ ಭಟ್ ಉಜಿರೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಭ್ರಾಮರಿ ಮಾಪಲಾಡಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಾನಂದ ಲಾಯಿಲ, ಕಾರ್ಯಾಧ್ಯಕ್ಷ ನಾರಾಯಣ ಪೂಜಾರಿ ಬರೆಮೇಲು, ಪ್ರಧಾನ ಕಾರ್ಯದರ್ಶಿ ರಾಜೀವ ಸಾಲಿಯಾನ್ ಮುಂಡೂರು, ಕೋಶಾಧಿಕಾರಿ ಪ್ರಶಾಂತ್ ಕುದ್ಯಾಡಿ, ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಬಂಗೇರ ಅಂಕಾಜೆ, ಪ್ರಧಾನ ಕಾರ್ಯದರ್ಶಿ ಮೋಹನ್ ಬಟ್ಯರಡ್ಡ, ಸ್ವಾಗತ ಸಮಿತಿ ಸಂಚಾಲಕ ಚಂದ್ರರಾಜ್ ನೂಜೆಲು, ಮನೋಹರ ಪಡಿವಾಳ್ , ಭಗೀರಥ ಜಿ. ,ರಮಾನಂದ ಸಾಲಿಯಾನ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಯೋಗೀಶ್ ಕುಲಾಲ್ ಪಕ್ಕಿದಕಲ, ಪ್ರಧಾನ ಅರ್ಚಕ ಯಶವಂತ ಶಾಂತಿ, ಭಜನಾ ಸಮಿತಿ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ಮಾಪಲಾಡಿ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಶಿಬಾಜೆ ಹರೀಶ್ ಮುಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ: ಎಸ್.ಪಿ ಸ್ಪಷ್ಟನೆ

Suddi Udaya

ರೆಖ್ಯ : ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಮನೆ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ

Suddi Udaya

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ವಾರ್ಷಿಕ ಮಹಾಸಭೆ

Suddi Udaya
error: Content is protected !!