28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

ಬೆಳ್ತಂಗಡಿ: ಸುನ್ನೀ ಯುವಜನ ಸಂಘ(ಎಸ್‌ವೈಎಸ್) ಇದರ ಗುರುವಾಯನಕೆರೆ ಶಾಖೆಯ ವತಿಯಿಂದ ದಾನಿಗಳ ಸಹಕಾರದೊಂದಿಗೆ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ, ಆಧ್ಯಾತ್ಮಿಕ ಕಾರ್ಯಕ್ರಮ ಹಾಗೂ ಸಾಮೂಹಿಕ‌ ಇಫ್ತಾರ್ ಕೂಟ ಕಾರ್ಯಕ್ರಮ ಗುರುವಾಯನಕೆರೆ ಶಾದಿ ಮಹಲ್ ನಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಎಸ್‌ವೈಎಸ್ ಯುನಿಟ್ ಅಧ್ಯಕ್ಷ, ಉದ್ಯಮಿ‌ ಹಾಜಿ ಹಸೈನಾರ್ ಶಾಫಿ ವಹಿಸಿದ್ದರು.
ಸಯ್ಯಿದ್ ಸಾದಾತ್ ತಂಙಳ್ ದಾನಿಗಳಿಗೆ ದುಆ ಮಾಡಿ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಪರಪ್ಪು ಮಸ್ಜಿದ್ ಖತೀಬ್ ತಾಜುದ್ದೀನ್ ಸಖಾಫಿ ಪ್ರಭಾಷಣ ನಡೆಸಿಕೊಟ್ಟರು.
ನಮ್ಮ ಆದಾಯದ ಒಂದಂಶ ದಾನ ನಮ್ಮವರ ಬಡತನವನ್ನು ದೂರೀಕರಿಸಲು ಸಹಾಯವಾಗುತ್ತದೆ. ರಂಝಾನ್ ಉಪವಾಸದಿಂದ ಬಡವರ ಬಡತನ ಮತ್ತು ಹಸಿವಿನ ಅರಿವು ನಮ್ಮಲ್ಲೂ ಮೂಡಲು ಸಹಾಯಿಯಾಗುತ್ತದೆ ಎಂದರು.
ರಂಝಾನ್ ಕಿಟ್ ವಿತರಣೆಗೆ ಪೊಸೋಟು ಮಲ್ಹರ್ ಸಂಸ್ಥೆಯ ಚೇರ್ಮೆನ್ ಸಯ್ಯಿದ್ ಜಮಾಲುದ್ದೀನ್ ಅಲ್ ಬುಖಾರಿ ತಂಙಳ್ ನೇತೃತ್ವ ನೀಡಿದರು.
ಕಾರ್ಯಕ್ರಮಕ್ಕೆ ಅಶ್ರಫ್ ಆಲಿಕುಂಞಿ ಮುಂಡಾಜೆ, ಯಾಕೂಬ್ ಮುಸ್ಲಿಯಾರ್ ಮೇಲಂತಬೆಟ್ಟು, ಹಮೀದ್ ಮುಸ್ಲಿಯಾರ್, ಜಮಾಅತ್ ಅಧ್ಯಕ್ಷ ಉಸ್ಮಾನ್ ಶಾಫಿ, ಮುದರ್ರಿಸ್ ಆದಂ ಅಹ್‌ಸನಿ, ಸಾದಿಕ್ ಮಾಸ್ಟರ್ ಮಲೆಬೆಟ್ಟು, ಇವರು ಶುಭ ಹಾರೈಸಿದರು.
ಜಿ‌.ಎಸ್ ಆದಂ ಸಾಹೇಬ್, ಜಿ.ಕೆ ಉಮರ್, ಮುತ್ತಲಿಬ್, ಲೆತೀಫ್ ಹಾಜಿ ಸಲೀಂ ಕನ್ಯಾಡಿ, ಕಾಸಿಂ ಮುಸ್ಲಿಯಾರ್, ಅಬೂಬಕ್ಕರ್ ಸಮಡೈನ್, ಅಬೂಬಕ್ಕರ್ ಪೆಲತ್ತಳಿಕೆ, ಅಬೂಸ್ವಾಲಿಹ್, ನೌಶಾದ್ ಸಖಾಫಿ, ಅಶ್ರಫ್ ಗುರುವಾಯನಕೆರೆ, ಮುಹಮ್ಮದ್ ಫ್ಯಾಶನ್ ವರ್ಲ್ಡ್, ಸುಲೈಮಾನ್ ಪಾಂಡೇಶ್ವರ, ಇಸ್ಮಾಯಿಲ್, ಶರೀಫ್ ಝುಹುರಿ, ಅಬ್ದುಲ್ ರಹಿಮಾನ್ ಸಖಾಫಿ, ಉಸ್ಮಾನ್ ಮೊದಲಾದವರು ಭಾಗವಹಿಸಿದ್ದರು.
ನಂತರ ಕಿಟ್ ವಿತರಣೆ ಬಳಿಕ ಸಾಮೂಹಿಕ ಇಫ್ತಾರ್ ಕೂಟ ನಡೆಯಿತು.

Related posts

ಬೆಳಾಲು ಕೊಡೋಳುಕೆರೆ ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಪೋಷಕರನ್ನು ಪತ್ತೆಹಚ್ಚಿದ ಪೊಲೀಸರು

Suddi Udaya

ಬೆಳ್ತಂಗಡಿ ಪ್ರತಿಷ್ಠಿತ ಬಿಲ್ಲವ ಗುತ್ತು ಮನೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

Suddi Udaya

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮರಕ್ಕೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

Suddi Udaya

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya
error: Content is protected !!