May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ : ಜೆಸಿಐ ತರಬೇತುದಾರನ್ನು ಸೃಷ್ಟಿಸುತ್ತದೆ ಎಂಬ ಮಾತಿಗೆ ಪೂರಕವಾಗಿ ಘಟಕದ ಸದಸ್ಯರುಗಳಿಗೆ ತಂಡ ನಿರ್ವಹಣೆಯ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಲ್ಲಿ ಹಮ್ಮಿಕೊಳ್ಳಲಾಯಿತು.

ಮೂಡುಬಿದಿರೆ ಜೆಸಿಐನ ತರಬೇತುದಾರರಾದ ಜೆಸಿ ಚೇತನ್ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಪ್ರತಿಭೆಗಳಿಗೆ ಅವಕಾಶ ನೀಡುವಲ್ಲಿ ಸದಾ ಹೆಸರುವಾಸಿಯಾಗಿರುವ ಜೆಸಿಐ ಬೆಳ್ತಂಗಡಿಯು ಮಡಿಕೇರಿಯ ಕು.ರಶ್ಮಿ ಇವರ ಕವನ ವಚನಗಳಿಗೆ ವೇದಿಕೆ ಕಲ್ಪಿಸಿ ಕೊಟ್ಟಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷರಾದ ಶಂಕರ್ ರಾವ್ ವಹಿಸಿದ್ದರು.
ವೇದಿಕೆಯಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್, ಜೊತೆ ಕಾರ್ಯದರ್ಶಿ ಸೃಜನ್ ಆರ್ ರೈ, ಜೂನಿಯರ್ ಜೆಸಿ ಅಧ್ಯಕ್ಷ ರಾಮಕೃಷ್ಣ ಶರ್ಮಾ ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಘಟಕದ ಉಪಾಧ್ಯಕ್ಷರುಗಳಾದ ರಂಜಿತ್ ಹೆಚ್.ಡಿ, ಹೇಮಾವತಿ ಮತ್ತು ಪ್ರೀತಮ್ ಶೆಟ್ಟಿ, ಪೂರ್ವಾಧ್ಯಕ್ಷರಾದ ನಾರಾಯಣ್ ಶೆಟ್ಟಿ, ಸದಸ್ಯರುಗಳಾದ ವಿನಾಯಕ್ ಪ್ರಸಾದ್, ಶೈಲೇಶ್, ಸ್ಮಿತೇಶ್ ಎಸ್ ಬಾರ್ಯ ಪಾಲ್ಗೊಂಡಿದ್ದರು.

Related posts

ಕಾಯರ್ತಡ್ಕ: ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

Suddi Udaya

ಮರುಮೌಲ್ಯಮಾಪನ: ಎಸ್‌ಡಿಎಂ ಪಿಯು ಕಾಲೇಜಿನ ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಗೇರುಕಟ್ಟೆ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪುರುಷೋತ್ತಮ ಜಿ

Suddi Udaya
error: Content is protected !!