May 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ


ಮಚ್ಚಿನ: ಬೇಸಿಗೆ ಶಿಬಿರದ ಪ್ರಯುಕ್ತ ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಇವರ ಆಶ್ರಯದಲ್ಲಿ ಜೆಸಿಐ ಘಟಕ ಮಡಂತ್ಯಾರು ಇವರ ಸಹಭಾಗಿತ್ವದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ನೆತ್ತರ ಸ.ಕಿ.ಪ್ರಾ. ಶಾಲೆಯಲ್ಲಿ ನಡೆಯಿತು.

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಮೋಹಿನಿ ಯೋಗೀಶ್ ಅಧ್ಯಕ್ಷತೆ ವಹಿಸಿದ್ದರು. ಜೆಸಿಐ ಘಟಕ ಮಡಂತ್ಯಾರು ಇದರ ಅಧ್ಯಕ್ಷ ಅಶೋಕ್ ಕುಮಾರ್ ಗುಂಡಿಯಲ್ಕೆ ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ತಿಳಿ ಹೇಳುವ ಕಾರ್ಯ ನಮ್ಮಿಂದಾಗ ಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಸುಖೇಶ್ ಬಾಬು, ಜೆಸಿಐ ನ ವಲಯಾಧಿಕಾರಿ ನವೀನ್ ಕೊಡ್ಲಕ್ಕೆ, ಯಕ್ಷಗಾನ ನಾಟ್ಯ ಗುರು ದೇವಿಪ್ರಸಾದ್ ಗುರುವಾಯನಕೆರೆ, ಶಾಲಾ ಮುಖ್ಯೋಪಾಧ್ಯಾಯ ಸೀತಾರಾಮ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಗೌರವ ಶಿಕ್ಷಕಿ ಚಿರಂಜಿನಿ ನಿರೂಪಿಸಿ ಸ್ವಾಗತಿಸಿದರು. ಶಾಲಾ ಸಹಶಿಕ್ಷಕಿ ಶ್ರೀಮತಿ ರೂಪಾ ರುಫೀನಾ ರೊಡ್ರಿಗಸ್ ಧನ್ಯವಾದವಿತ್ತರು.

Related posts

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ನಡ- ಕನ್ಯಾಡಿ ಗ್ರಾಮಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಹತ್ಯಡ್ಕ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಪ್ರತಿಭಾ ಕಾರಂಜಿಯಲ್ಲಿ ಸಮಗ್ರ ಚಾಂಪಿಯನ್ ಶಿಪ್ ಮುಡಿಗೇರಿಸಿಕೊಂಡ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ

Suddi Udaya
error: Content is protected !!