28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

ನಿಡ್ಲೆ : ನಿಡ್ಲೆ ಗ್ರಾಮದ ಬರಂಗಾಯ ಮಜಲ್ ಮಾರು ನಿವಾಸಿ ಸಂಜೀವ ಗೌಡ ಇವರ ಪುತ್ರಿ ಕುಮಾರಿ ದೀಪಿಕಾ ಇವರಿಗೆ ಅಸ್ತಿಮಜ್ಜೆ ಶಸ್ತ್ರಚಿಕಿತ್ಸಾ ಸಹಾಯಾರ್ಥವಾಗಿ ಸ್ಪಂದನಾ ಸೇವಾ ಸಂಘದಿಂದ ರೂ. 25 ಸಾವಿರ ಮತ್ತು ನಿಡ್ಲೆ ಗ್ರಾಮದ ನೆಡಿಲು, ಗಾಣಂತಿ, ನೂಜಿಲ ಬೈಲುವಾರು ಸಮಿತಿ ವತಿಯಿಂದ ಸಂಗ್ರಹವಾದ ರೂ 5,000 ವನ್ನು ಒಟ್ಟು ಸೇರಿಸಿ ಒಟ್ಟು ರೂ.30 ಸಾವಿರದ ಚೆಕ್ಕನ್ನು ಸೀತಾರಾಮ ಗೌಡ ಸೌರಭ ಬೆಳಾಲು ಇವರ ಮೂಲಕ ಫಲಾನುಭವಿಗೆ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ವಾಣಿ ಸೌಹಾರ್ದ ಕೋ-ಅಪರೇಟೀವ್ ಸೊಸೈಟಿ ನಿರ್ದೇಶಕರಾದ ಸುರೇಶ್ ಕೌಡಂಗೆ, ಸ್ಪಂದನಾ ಸೇವಾ ಸಂಘದ ಸಂಚಾಲಕರಾದ ಮೋಹನ್ ಗೌಡ ಕೊಯ್ಯೂರು, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರುಗಳಾದ ಮಹಾಬಲ ಗೌಡ ಮತ್ತು ಶ್ರೀಮತಿ ಮೀನಾಕ್ಷಿ, ತಾಲೂಕು ಯುವ ವೇದಿಕೆಯ ನಿರ್ದೇಶಕರಾದ ನಿತಿನ್ ಗೌಡ ಕಲ್ಮಂಜ, ನಿಡ್ಲೆ ಗ್ರಾಮ ಸಮಿತಿಯ ಯುವ ವೇದಿಕೆಯ ಕಾರ್ಯದರ್ಶಿ ರಾಜೇಂದ್ರ ಗೌಡ ನಿಡ್ಲೆ, ಮಂಜು ನಿಡ್ಲೆ, ಲೋಕೇಶ್ ಅಣಿಯೂರು ಮೊದಲಾದವರು ಉಪಸ್ಥಿತರಿದ್ದರು.

Related posts

ಜ.25: ಕುವೆಟ್ಟು ಮಹಮ್ಮಾಯಿ ದೇವಿಯ ಮಾರಿಪೂಜೆ ಹಾಗೂ ಗುಳಿಗ ದೈವಕ್ಕೆ ನೇಮೋತ್ಸವ

Suddi Udaya

ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ರೂ‌ 1.50 ಕೋಟಿ ಬೆಲೆಯ ಬಿಳಿ ಬಣ್ಣದ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಕಾರು

Suddi Udaya

ಇಂಗ್ಲೆಂಡ್ ನಲ್ಲಿ ಗುರುವಾಯನಕೆರೆಯ 12 ವರ್ಷದ ಬಾಲಕನ ಮಹಾನ್ ಸಾಧನೆ- ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ನ 4ನೇ ಸುತ್ತಿನಲ್ಲಿ ಪ್ರಶಸ್ತಿ ಪಡೆದ ಕಾರ್ ರೇಸರ್ ಕನಿಷ್ಕ್ ರಾವ್

Suddi Udaya

ಜಸ್ಟ್ ರೈಡ್ ನೋಡುತ್ತೇನೆಂದು ಬೈಕ್ ತೆಗೆದುಕೊಂಡಾತ ವಾಪಸ್ ಬರಲೇ ಇಲ್ಲ: ಇತ್ತೆ ಬರುವೆ ಎಂದು ಹೇಳಿ ಹೋದಾತನೂ ಇಲ್ಲ…ಬೈಕೂ ಇಲ್ಲ…:ಕಾಶಿಪಟ್ಣದ ಯುವಕ ಇಶಾನ್ ಪೂಜಾರಿಯರಿಂದ ಮೂಡಬಿದ್ರೆ ಪೋಲೀಸರಿಗೆ ದೂರು: ಬೈಕ್ ಸಹಿತ ಇಶಾನ್ ಶೆಟ್ಟಿ ಉಚ್ಚಿಲ್ ಪೊಲೀಸರ ವಶ

Suddi Udaya

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!