May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

ನಿಡ್ಲೆ : ನಿಡ್ಲೆ ಗ್ರಾಮದ ಬರಂಗಾಯ ಮಜಲ್ ಮಾರು ನಿವಾಸಿ ಸಂಜೀವ ಗೌಡ ಇವರ ಪುತ್ರಿ ಕುಮಾರಿ ದೀಪಿಕಾ ಇವರಿಗೆ ಅಸ್ತಿಮಜ್ಜೆ ಶಸ್ತ್ರಚಿಕಿತ್ಸಾ ಸಹಾಯಾರ್ಥವಾಗಿ ಸ್ಪಂದನಾ ಸೇವಾ ಸಂಘದಿಂದ ರೂ. 25 ಸಾವಿರ ಮತ್ತು ನಿಡ್ಲೆ ಗ್ರಾಮದ ನೆಡಿಲು, ಗಾಣಂತಿ, ನೂಜಿಲ ಬೈಲುವಾರು ಸಮಿತಿ ವತಿಯಿಂದ ಸಂಗ್ರಹವಾದ ರೂ 5,000 ವನ್ನು ಒಟ್ಟು ಸೇರಿಸಿ ಒಟ್ಟು ರೂ.30 ಸಾವಿರದ ಚೆಕ್ಕನ್ನು ಸೀತಾರಾಮ ಗೌಡ ಸೌರಭ ಬೆಳಾಲು ಇವರ ಮೂಲಕ ಫಲಾನುಭವಿಗೆ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ವಾಣಿ ಸೌಹಾರ್ದ ಕೋ-ಅಪರೇಟೀವ್ ಸೊಸೈಟಿ ನಿರ್ದೇಶಕರಾದ ಸುರೇಶ್ ಕೌಡಂಗೆ, ಸ್ಪಂದನಾ ಸೇವಾ ಸಂಘದ ಸಂಚಾಲಕರಾದ ಮೋಹನ್ ಗೌಡ ಕೊಯ್ಯೂರು, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರುಗಳಾದ ಮಹಾಬಲ ಗೌಡ ಮತ್ತು ಶ್ರೀಮತಿ ಮೀನಾಕ್ಷಿ, ತಾಲೂಕು ಯುವ ವೇದಿಕೆಯ ನಿರ್ದೇಶಕರಾದ ನಿತಿನ್ ಗೌಡ ಕಲ್ಮಂಜ, ನಿಡ್ಲೆ ಗ್ರಾಮ ಸಮಿತಿಯ ಯುವ ವೇದಿಕೆಯ ಕಾರ್ಯದರ್ಶಿ ರಾಜೇಂದ್ರ ಗೌಡ ನಿಡ್ಲೆ, ಮಂಜು ನಿಡ್ಲೆ, ಲೋಕೇಶ್ ಅಣಿಯೂರು ಮೊದಲಾದವರು ಉಪಸ್ಥಿತರಿದ್ದರು.

Related posts

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಆರ್ ಟಿ ಇ ದಾಖಲಾತಿಗೆ ಅರ್ಜಿ ಆಹ್ವಾನ: ಮೇ.20 ಕೊನೆಯ ದಿನ

Suddi Udaya

ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.95 ಫಲಿತಾಂಶ

Suddi Udaya

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಸದಸ್ಯರಿಗೆ ಸೋಲಾರ್ ವಿತರಣೆ

Suddi Udaya
error: Content is protected !!