25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ : ಜೆಸಿಐ ತರಬೇತುದಾರನ್ನು ಸೃಷ್ಟಿಸುತ್ತದೆ ಎಂಬ ಮಾತಿಗೆ ಪೂರಕವಾಗಿ ಘಟಕದ ಸದಸ್ಯರುಗಳಿಗೆ ತಂಡ ನಿರ್ವಹಣೆಯ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಲ್ಲಿ ಹಮ್ಮಿಕೊಳ್ಳಲಾಯಿತು.

ಮೂಡುಬಿದಿರೆ ಜೆಸಿಐನ ತರಬೇತುದಾರರಾದ ಜೆಸಿ ಚೇತನ್ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಪ್ರತಿಭೆಗಳಿಗೆ ಅವಕಾಶ ನೀಡುವಲ್ಲಿ ಸದಾ ಹೆಸರುವಾಸಿಯಾಗಿರುವ ಜೆಸಿಐ ಬೆಳ್ತಂಗಡಿಯು ಮಡಿಕೇರಿಯ ಕು.ರಶ್ಮಿ ಇವರ ಕವನ ವಚನಗಳಿಗೆ ವೇದಿಕೆ ಕಲ್ಪಿಸಿ ಕೊಟ್ಟಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷರಾದ ಶಂಕರ್ ರಾವ್ ವಹಿಸಿದ್ದರು.
ವೇದಿಕೆಯಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್, ಜೊತೆ ಕಾರ್ಯದರ್ಶಿ ಸೃಜನ್ ಆರ್ ರೈ, ಜೂನಿಯರ್ ಜೆಸಿ ಅಧ್ಯಕ್ಷ ರಾಮಕೃಷ್ಣ ಶರ್ಮಾ ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಘಟಕದ ಉಪಾಧ್ಯಕ್ಷರುಗಳಾದ ರಂಜಿತ್ ಹೆಚ್.ಡಿ, ಹೇಮಾವತಿ ಮತ್ತು ಪ್ರೀತಮ್ ಶೆಟ್ಟಿ, ಪೂರ್ವಾಧ್ಯಕ್ಷರಾದ ನಾರಾಯಣ್ ಶೆಟ್ಟಿ, ಸದಸ್ಯರುಗಳಾದ ವಿನಾಯಕ್ ಪ್ರಸಾದ್, ಶೈಲೇಶ್, ಸ್ಮಿತೇಶ್ ಎಸ್ ಬಾರ್ಯ ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದಿಂದ “ಭಜಕೆರೆ ಆಟಿದ ಕಮ್ಮೆನ ಜನಪದ ಮಿನದನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.24- 30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!