25.5 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿನಿಧನ

ಪುಂಜಾಲಕಟ್ಟೆ: ಶಂಕಿತ ರೇಬಿಸ್ ಗೆ ಪ್ರಶಾಂತ್ ಮೃತ್ಯು

ಪುಂಜಾಲಕಟ್ಟೆ: ಶಂಕಿತ ರೇಬಿಸ್‌ಗೆ ಯುವಕನೋರ್ವ ಬಲಿಯಾದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆಯಲ್ಲಿ ಎ.3 ರಂದು ಸಂಭವಿಸಿದೆ .

ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ಅಶೋಕ ಹೆಗ್ಡೆ ಅವರ ಪುತ್ರ ಪ್ರಶಾಂತ ಹೆಗ್ಡೆ(31)ಅವರು ಮೃತ ಪಟ್ಟ ದುರ್ದೈವಿಯಾಗಿದ್ದಾರೆ. ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತ್ ಅವರಿಗೆ ಅವರ ಮನೆಯ ನಾಯಿಮರಿ ಕಡಿದಿದ್ದು, ಬಳಿಕ ನಾಯಿ ಮೃತ ಪಟ್ಟಿತ್ತು. ಆದರೆ ಪ್ರಶಾಂತ್ ಅವರು ನಾಯಿ ಕಡಿದಿರುವುಕ್ಕೆ ಸೂಕ್ತ ಚಿಕಿತ್ಸೆ ಪಡೆದಿರಲಿಲ್ಲ ಎನ್ನಲಾಗಿದೆ. ಕಳೆದೆರಡು ದಿನಗಳಿಂದ ಅವರು ತೀವ್ರ ಸಂಕಟ, ಜ್ವರದಿಂದ ಒದ್ದಾಡಿದ್ದು, ಪುಂಜಾಲಕಟ್ಟೆ ಪ್ರಾ. ಆ. ಕೇಂದ್ರದಲ್ಲಿ ಚಿಕಿತ್ಸೆಗಾಗಿ ತೆರಳಿದ್ದಾರೆ. ಜ್ವರ ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಸರಕಾರಿ ಆಸ್ಪತ್ರೆಗೆ ಕಳುಹಿಸಿದ್ದರು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಪ್ರಶಾಂತ್ ಮೃತಪಟ್ಟಿದ್ದಾರೆ.

ಪ್ರಶಾಂತ್ ಅವರ ಕ್ಲಿನಿಕಲ್ ಪರೀಕ್ಷೆ ವರದಿಗಳು ರೇಬಿಸ್ ಲಕ್ಷಣ ಹೊಂದಿದ್ದವು. ಆದರೆ ಅವರು ಯಾವ ಕಾರಣದಿಂದ ಮೃತರಾಗಿದ್ದಾರೆಂದು ನಿಖರವಾಗಿ ತಿಳಿದು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಅವರು ತಿಳಿಸಿದ್ದಾರೆ. ಇಂಥ ಸಂದರ್ಭದಲ್ಲಿ ಹೆಚ್ಚಿನ ನಿಗಾ ವಹಿಸುವುದು, ತಕ್ಷಣ ಚಿಕಿತ್ಸೆ ಕೊಡಿಸುವುದು ಅಗತ್ಯ ಎಂದು ಅವರು ತಿಳಿಸಿದ್ದಾರೆ. ನಾಯಿ ಕಡಿದ ಬಳಿಕ ಶೀಘ್ರ ಚಿಕಿತ್ಸೆ ಪಡೆದಿದ್ದರೆ ಅವರು ಬದುಕುಳಿಯುತ್ತಿದ್ದರು. ಆದರೆ, ಅದಾಗಲೇ ರೇಬಿಸ್ ಲಕ್ಷಣಗಳು ಉಲ್ಬಣಗೊಂಡಿರಬಹುದು ಎಂದು ಅವರು ತಿಳಿಸಿದ್ದಾರೆ

Related posts

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಅವಿರೋಧ ಆಯ್ಕೆ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!