23.7 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿನಿಧನ

ಪುಂಜಾಲಕಟ್ಟೆ: ಶಂಕಿತ ರೇಬಿಸ್ ಗೆ ಪ್ರಶಾಂತ್ ಮೃತ್ಯು

ಪುಂಜಾಲಕಟ್ಟೆ: ಶಂಕಿತ ರೇಬಿಸ್‌ಗೆ ಯುವಕನೋರ್ವ ಬಲಿಯಾದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆಯಲ್ಲಿ ಎ.3 ರಂದು ಸಂಭವಿಸಿದೆ .

ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ಅಶೋಕ ಹೆಗ್ಡೆ ಅವರ ಪುತ್ರ ಪ್ರಶಾಂತ ಹೆಗ್ಡೆ(31)ಅವರು ಮೃತ ಪಟ್ಟ ದುರ್ದೈವಿಯಾಗಿದ್ದಾರೆ. ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತ್ ಅವರಿಗೆ ಅವರ ಮನೆಯ ನಾಯಿಮರಿ ಕಡಿದಿದ್ದು, ಬಳಿಕ ನಾಯಿ ಮೃತ ಪಟ್ಟಿತ್ತು. ಆದರೆ ಪ್ರಶಾಂತ್ ಅವರು ನಾಯಿ ಕಡಿದಿರುವುಕ್ಕೆ ಸೂಕ್ತ ಚಿಕಿತ್ಸೆ ಪಡೆದಿರಲಿಲ್ಲ ಎನ್ನಲಾಗಿದೆ. ಕಳೆದೆರಡು ದಿನಗಳಿಂದ ಅವರು ತೀವ್ರ ಸಂಕಟ, ಜ್ವರದಿಂದ ಒದ್ದಾಡಿದ್ದು, ಪುಂಜಾಲಕಟ್ಟೆ ಪ್ರಾ. ಆ. ಕೇಂದ್ರದಲ್ಲಿ ಚಿಕಿತ್ಸೆಗಾಗಿ ತೆರಳಿದ್ದಾರೆ. ಜ್ವರ ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಸರಕಾರಿ ಆಸ್ಪತ್ರೆಗೆ ಕಳುಹಿಸಿದ್ದರು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಪ್ರಶಾಂತ್ ಮೃತಪಟ್ಟಿದ್ದಾರೆ.

ಪ್ರಶಾಂತ್ ಅವರ ಕ್ಲಿನಿಕಲ್ ಪರೀಕ್ಷೆ ವರದಿಗಳು ರೇಬಿಸ್ ಲಕ್ಷಣ ಹೊಂದಿದ್ದವು. ಆದರೆ ಅವರು ಯಾವ ಕಾರಣದಿಂದ ಮೃತರಾಗಿದ್ದಾರೆಂದು ನಿಖರವಾಗಿ ತಿಳಿದು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಅವರು ತಿಳಿಸಿದ್ದಾರೆ. ಇಂಥ ಸಂದರ್ಭದಲ್ಲಿ ಹೆಚ್ಚಿನ ನಿಗಾ ವಹಿಸುವುದು, ತಕ್ಷಣ ಚಿಕಿತ್ಸೆ ಕೊಡಿಸುವುದು ಅಗತ್ಯ ಎಂದು ಅವರು ತಿಳಿಸಿದ್ದಾರೆ. ನಾಯಿ ಕಡಿದ ಬಳಿಕ ಶೀಘ್ರ ಚಿಕಿತ್ಸೆ ಪಡೆದಿದ್ದರೆ ಅವರು ಬದುಕುಳಿಯುತ್ತಿದ್ದರು. ಆದರೆ, ಅದಾಗಲೇ ರೇಬಿಸ್ ಲಕ್ಷಣಗಳು ಉಲ್ಬಣಗೊಂಡಿರಬಹುದು ಎಂದು ಅವರು ತಿಳಿಸಿದ್ದಾರೆ

Related posts

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya

ತ್ರೋಬಾಲ್ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya
error: Content is protected !!