
ಬೆಳ್ತಂಗಡಿ: ಭಗವಾನ್ ಶ್ರೀ 1008 ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕು ಕಚೇರಿ ಆಡಳಿತ ಸೌಧದಲ್ಲಿ ಬೆಳ್ತಂಗಡಿ ತಹಸೀಲ್ದಾರ್ ಸುರೇಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜರಗಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ತಾಲೂಕು ಚುನಾವಣಾಧಿಕಾರಿ ಮಂಗಳೂರಿನ ಯೋಗೀಶ್ ರವರು ಮಾತನಾಡಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಸಂದೇಶಗಳನ್ನು ಪಾಲಿಸುವಂತೆ ಕರೆ ನೀಡಿದರು.

ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ನಗರ ಪಂಚಾಯತಿ ಮುಖ್ಯ ಅಧಿಕಾರಿ ನಟರಾಜ್, ರಾಜ್ಯ ಸರಕಾರಿ ನೌಕರ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ಕೆ. ಜಯಕೀರ್ತಿ ಜೈನ್, ಶಿಶಿಲ ಜಿನಮಂದಿರದ ಆಡಳಿತ ಸಮಿತಿಯ ಅಧ್ಯಕ್ಷ ವಿಜಯ ಕುಮಾರ್, ಸರಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಜಯರಾಜ್ ಜೈನ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶ್ರೀಮತಿ ತಾರಕೇಸರಿ ನಿರೂಪಿಸಿ, ಪರಮೇಶ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.













