26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ


ಮಚ್ಚಿನ: ಬೇಸಿಗೆ ಶಿಬಿರದ ಪ್ರಯುಕ್ತ ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಇವರ ಆಶ್ರಯದಲ್ಲಿ ಜೆಸಿಐ ಘಟಕ ಮಡಂತ್ಯಾರು ಇವರ ಸಹಭಾಗಿತ್ವದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ನೆತ್ತರ ಸ.ಕಿ.ಪ್ರಾ. ಶಾಲೆಯಲ್ಲಿ ನಡೆಯಿತು.

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಮೋಹಿನಿ ಯೋಗೀಶ್ ಅಧ್ಯಕ್ಷತೆ ವಹಿಸಿದ್ದರು. ಜೆಸಿಐ ಘಟಕ ಮಡಂತ್ಯಾರು ಇದರ ಅಧ್ಯಕ್ಷ ಅಶೋಕ್ ಕುಮಾರ್ ಗುಂಡಿಯಲ್ಕೆ ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ತಿಳಿ ಹೇಳುವ ಕಾರ್ಯ ನಮ್ಮಿಂದಾಗ ಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಸುಖೇಶ್ ಬಾಬು, ಜೆಸಿಐ ನ ವಲಯಾಧಿಕಾರಿ ನವೀನ್ ಕೊಡ್ಲಕ್ಕೆ, ಯಕ್ಷಗಾನ ನಾಟ್ಯ ಗುರು ದೇವಿಪ್ರಸಾದ್ ಗುರುವಾಯನಕೆರೆ, ಶಾಲಾ ಮುಖ್ಯೋಪಾಧ್ಯಾಯ ಸೀತಾರಾಮ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಗೌರವ ಶಿಕ್ಷಕಿ ಚಿರಂಜಿನಿ ನಿರೂಪಿಸಿ ಸ್ವಾಗತಿಸಿದರು. ಶಾಲಾ ಸಹಶಿಕ್ಷಕಿ ಶ್ರೀಮತಿ ರೂಪಾ ರುಫೀನಾ ರೊಡ್ರಿಗಸ್ ಧನ್ಯವಾದವಿತ್ತರು.

Related posts

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ಕಾರ್ಯದರ್ಶಿ ಸರೋಜಿನಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಚೆಕ್ ಅಮಾನ್ಯ ಪ್ರಕರಣ; ನ್ಯಾಯಾಲಯದಲ್ಲಿ ಖುಲಾಸೆ

Suddi Udaya

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

Suddi Udaya

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

Suddi Udaya
error: Content is protected !!