May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

ಬೆಳ್ತಂಗಡಿ: ಸುನ್ನೀ ಯುವಜನ ಸಂಘ(ಎಸ್‌ವೈಎಸ್) ಇದರ ಗುರುವಾಯನಕೆರೆ ಶಾಖೆಯ ವತಿಯಿಂದ ದಾನಿಗಳ ಸಹಕಾರದೊಂದಿಗೆ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ, ಆಧ್ಯಾತ್ಮಿಕ ಕಾರ್ಯಕ್ರಮ ಹಾಗೂ ಸಾಮೂಹಿಕ‌ ಇಫ್ತಾರ್ ಕೂಟ ಕಾರ್ಯಕ್ರಮ ಗುರುವಾಯನಕೆರೆ ಶಾದಿ ಮಹಲ್ ನಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಎಸ್‌ವೈಎಸ್ ಯುನಿಟ್ ಅಧ್ಯಕ್ಷ, ಉದ್ಯಮಿ‌ ಹಾಜಿ ಹಸೈನಾರ್ ಶಾಫಿ ವಹಿಸಿದ್ದರು.
ಸಯ್ಯಿದ್ ಸಾದಾತ್ ತಂಙಳ್ ದಾನಿಗಳಿಗೆ ದುಆ ಮಾಡಿ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಪರಪ್ಪು ಮಸ್ಜಿದ್ ಖತೀಬ್ ತಾಜುದ್ದೀನ್ ಸಖಾಫಿ ಪ್ರಭಾಷಣ ನಡೆಸಿಕೊಟ್ಟರು.
ನಮ್ಮ ಆದಾಯದ ಒಂದಂಶ ದಾನ ನಮ್ಮವರ ಬಡತನವನ್ನು ದೂರೀಕರಿಸಲು ಸಹಾಯವಾಗುತ್ತದೆ. ರಂಝಾನ್ ಉಪವಾಸದಿಂದ ಬಡವರ ಬಡತನ ಮತ್ತು ಹಸಿವಿನ ಅರಿವು ನಮ್ಮಲ್ಲೂ ಮೂಡಲು ಸಹಾಯಿಯಾಗುತ್ತದೆ ಎಂದರು.
ರಂಝಾನ್ ಕಿಟ್ ವಿತರಣೆಗೆ ಪೊಸೋಟು ಮಲ್ಹರ್ ಸಂಸ್ಥೆಯ ಚೇರ್ಮೆನ್ ಸಯ್ಯಿದ್ ಜಮಾಲುದ್ದೀನ್ ಅಲ್ ಬುಖಾರಿ ತಂಙಳ್ ನೇತೃತ್ವ ನೀಡಿದರು.
ಕಾರ್ಯಕ್ರಮಕ್ಕೆ ಅಶ್ರಫ್ ಆಲಿಕುಂಞಿ ಮುಂಡಾಜೆ, ಯಾಕೂಬ್ ಮುಸ್ಲಿಯಾರ್ ಮೇಲಂತಬೆಟ್ಟು, ಹಮೀದ್ ಮುಸ್ಲಿಯಾರ್, ಜಮಾಅತ್ ಅಧ್ಯಕ್ಷ ಉಸ್ಮಾನ್ ಶಾಫಿ, ಮುದರ್ರಿಸ್ ಆದಂ ಅಹ್‌ಸನಿ, ಸಾದಿಕ್ ಮಾಸ್ಟರ್ ಮಲೆಬೆಟ್ಟು, ಇವರು ಶುಭ ಹಾರೈಸಿದರು.
ಜಿ‌.ಎಸ್ ಆದಂ ಸಾಹೇಬ್, ಜಿ.ಕೆ ಉಮರ್, ಮುತ್ತಲಿಬ್, ಲೆತೀಫ್ ಹಾಜಿ ಸಲೀಂ ಕನ್ಯಾಡಿ, ಕಾಸಿಂ ಮುಸ್ಲಿಯಾರ್, ಅಬೂಬಕ್ಕರ್ ಸಮಡೈನ್, ಅಬೂಬಕ್ಕರ್ ಪೆಲತ್ತಳಿಕೆ, ಅಬೂಸ್ವಾಲಿಹ್, ನೌಶಾದ್ ಸಖಾಫಿ, ಅಶ್ರಫ್ ಗುರುವಾಯನಕೆರೆ, ಮುಹಮ್ಮದ್ ಫ್ಯಾಶನ್ ವರ್ಲ್ಡ್, ಸುಲೈಮಾನ್ ಪಾಂಡೇಶ್ವರ, ಇಸ್ಮಾಯಿಲ್, ಶರೀಫ್ ಝುಹುರಿ, ಅಬ್ದುಲ್ ರಹಿಮಾನ್ ಸಖಾಫಿ, ಉಸ್ಮಾನ್ ಮೊದಲಾದವರು ಭಾಗವಹಿಸಿದ್ದರು.
ನಂತರ ಕಿಟ್ ವಿತರಣೆ ಬಳಿಕ ಸಾಮೂಹಿಕ ಇಫ್ತಾರ್ ಕೂಟ ನಡೆಯಿತು.

Related posts

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂತಿರುಗಿದಾಗ ನಾಲ್ಕೂರು ಬೊಕ್ಕಸ ಬಳಿ ಬೈಕ್ ಸ್ಕಿಡ್ : ಗಂಭೀರ ಗಾಯಗೊಂಡ ಮಹಿಳೆ ಸಾವು

Suddi Udaya

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ಪಂಚಾಯತ್ ಮಟ್ಟದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.23 ರಂದು ದ.ಕ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya
error: Content is protected !!