25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ : ಜೆಸಿಐ ತರಬೇತುದಾರನ್ನು ಸೃಷ್ಟಿಸುತ್ತದೆ ಎಂಬ ಮಾತಿಗೆ ಪೂರಕವಾಗಿ ಘಟಕದ ಸದಸ್ಯರುಗಳಿಗೆ ತಂಡ ನಿರ್ವಹಣೆಯ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಲ್ಲಿ ಹಮ್ಮಿಕೊಳ್ಳಲಾಯಿತು.

ಮೂಡುಬಿದಿರೆ ಜೆಸಿಐನ ತರಬೇತುದಾರರಾದ ಜೆಸಿ ಚೇತನ್ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಪ್ರತಿಭೆಗಳಿಗೆ ಅವಕಾಶ ನೀಡುವಲ್ಲಿ ಸದಾ ಹೆಸರುವಾಸಿಯಾಗಿರುವ ಜೆಸಿಐ ಬೆಳ್ತಂಗಡಿಯು ಮಡಿಕೇರಿಯ ಕು.ರಶ್ಮಿ ಇವರ ಕವನ ವಚನಗಳಿಗೆ ವೇದಿಕೆ ಕಲ್ಪಿಸಿ ಕೊಟ್ಟಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷರಾದ ಶಂಕರ್ ರಾವ್ ವಹಿಸಿದ್ದರು.
ವೇದಿಕೆಯಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್, ಜೊತೆ ಕಾರ್ಯದರ್ಶಿ ಸೃಜನ್ ಆರ್ ರೈ, ಜೂನಿಯರ್ ಜೆಸಿ ಅಧ್ಯಕ್ಷ ರಾಮಕೃಷ್ಣ ಶರ್ಮಾ ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಘಟಕದ ಉಪಾಧ್ಯಕ್ಷರುಗಳಾದ ರಂಜಿತ್ ಹೆಚ್.ಡಿ, ಹೇಮಾವತಿ ಮತ್ತು ಪ್ರೀತಮ್ ಶೆಟ್ಟಿ, ಪೂರ್ವಾಧ್ಯಕ್ಷರಾದ ನಾರಾಯಣ್ ಶೆಟ್ಟಿ, ಸದಸ್ಯರುಗಳಾದ ವಿನಾಯಕ್ ಪ್ರಸಾದ್, ಶೈಲೇಶ್, ಸ್ಮಿತೇಶ್ ಎಸ್ ಬಾರ್ಯ ಪಾಲ್ಗೊಂಡಿದ್ದರು.

Related posts

“ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಹಾಗೂ “ಪಬ್ ಜಿ “ಗ್ರೂಪಿನ ಸದಸ್ಯರಿಂದ ಸಹಾಯಧನ ಹಸ್ತಾಂತರ

Suddi Udaya

ಧರ್ಮಸ್ಥಳ: ಯುಗಾದಿ ಬಳಗದ ಸ್ನೇಹ ಪರ್ವ-2 ಕಾರ್ಯಕ್ರಮ

Suddi Udaya

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

Suddi Udaya

ಬಂದಾರು: ಮೈರೋಳ್ತಡ್ಕ ಸ.ಉ. ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

Suddi Udaya
error: Content is protected !!