ಮೇಲಂತಬೆಟ್ಟು : ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ ಮೇಲಂತಬೆಟ್ಟು ಇದರ ಬ್ರಹ್ಮಕಲಶೋತ್ಸವ ಅಂಗವಾಗಿ ಧಾರ್ಮಿಕ ಸಭೆಯು ಎ.4ರಂದು ದೇವಸ್ಥಾನದ ಸಭಾಂಗಣದಲ್ಲಿ ಜರುಗಿತು.
ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಧರ್ಮದ ಬಗ್ಗೆ ಸಂದೇಶ ನೀಡಿದರು.
ಮುಖ್ಯ ಅಥಿಗಳಾಗಿ ವಸಂತ ಸಾಲ್ಯಾನ್, ಪ್ರಾದೇಶಿಕ ನಿರ್ದೇಶಕರು, ಎಸ್.ಕೆ.ಡಿ.ಆರ್.ಡಿ.ಪಿ., ಉಡುಪಿ, ಸತೀಶ್ ಶೆಟ್ಟಿ, ನಿರ್ದೇಶಕರು, ಎಸ್.ಕೆ.ಡಿ.ಆರ್.ಡಿ.ಪಿ., ದ.ಕ. ಜಿಲ್ಲೆ ಭಾಗವಹಿಸಿದ್ದರು. ವೇದಿಕೆಯಲ್ಲಿ ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಭ್ರಾಮರಿ ಮಾಪಲಾಡಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಾನಂದ ಲಾಯಿಲ, ಕಾರ್ಯಾಧ್ಯಕ್ಷ ನಾರಾಯಣ ಪೂಜಾರಿ ಬರೆಮೇಲು, ಪ್ರಧಾನ ಕಾರ್ಯದರ್ಶಿ ರಾಜೀವ ಸಾಲಿಯಾನ್ ಮುಂಡೂರು, ಕೋಶಾಧಿಕಾರಿ ಪ್ರಶಾಂತ್ ಕುದ್ಯಾಡಿ, ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಬಂಗೇರ ಅಂಕಾಜೆ, ಪ್ರಧಾನ ಕಾರ್ಯದರ್ಶಿ ಮೋಹನ್ ಬಟ್ಯರಡ್ಡ, ಸ್ವಾಗತ ಸಮಿತಿ ಸಂಚಾಲಕ ಚಂದ್ರರಾಜ್ ನೂಜೆಲು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಯೋಗೀಶ್ ಕುಲಾಲ್ ಪಕ್ಕಿದಕಲ, ಪ್ರಧಾನ ಅರ್ಚಕ ಯಶವಂತ ಶಾಂತಿ, ಭಜನಾ ಸಮಿತಿ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ಮಾಪಲಾಡಿ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಭಕ್ತರು, ಗ್ರಾಮಸ್ಥರು ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಂಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶ್ರೀ ಕ್ಷೇತ್ರ, ನಾಳ ಇವರಿಂದ ಭಜನಾ ಕಾರ್ಯಕ್ರಮವನ್ನು ರವೀಂದ್ರನಾಥ ಜಿ., ಗುಂಪೋಳಿ ದೀಪ ಬೆಳಗಿಸಿ ಉದ್ಘಾಟಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾತ್ರಿ ಸ್ಥಳೀಯ ಶಾಲಾ ಮಕ್ಕಳಿಂದ ವಿವಿಧ ವಿನೋದಾವಳಿಗಳು ನಡೆಯಿತು.








