24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ಭಗವಾನ್ ಶ್ರೀ 1008 ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕು ಕಚೇರಿ ಆಡಳಿತ ಸೌಧದಲ್ಲಿ ಬೆಳ್ತಂಗಡಿ ತಹಸೀಲ್ದಾರ್ ಸುರೇಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ತಾಲೂಕು ಚುನಾವಣಾಧಿಕಾರಿ ಮಂಗಳೂರಿನ ಯೋಗೀಶ್ ರವರು ಮಾತನಾಡಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಸಂದೇಶಗಳನ್ನು ಪಾಲಿಸುವಂತೆ ಕರೆ ನೀಡಿದರು.

ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ನಗರ ಪಂಚಾಯತಿ ಮುಖ್ಯ ಅಧಿಕಾರಿ ನಟರಾಜ್, ರಾಜ್ಯ ಸರಕಾರಿ ನೌಕರ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ಕೆ. ಜಯಕೀರ್ತಿ ಜೈನ್, ಶಿಶಿಲ ಜಿನಮಂದಿರದ ಆಡಳಿತ ಸಮಿತಿಯ ಅಧ್ಯಕ್ಷ ವಿಜಯ ಕುಮಾರ್, ಸರಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಜಯರಾಜ್ ಜೈನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶ್ರೀಮತಿ ತಾರಕೇಸರಿ ನಿರೂಪಿಸಿ, ಪರಮೇಶ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Related posts

ಬೆಳ್ತಂಗಡಿ: ಕುಣಿತ‌ ಭಜನಾ ತರಬೇತುದಾರರ ‌ತಂಡದ‌ “ಭಜೋರೆ‌ ಮಾರುತಿ‌” ನೂತನ‌‌ ಲಾಂಚನ ಬಿಡುಗಡೆ

Suddi Udaya

ಸಿವಿಲ್ ಇಂಜಿನಿಯರಿಂಗ್ ನಲ್ಲಿ ನ್ಯಾಯತರ್ಫುವಿನ ಮೋಹಿನಿ ಹೆಚ್ ರವರಿಗೆ ಚಿನ್ನದ ಪದಕ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಜಿ.ಪಂ.ಕಿ.ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!