May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ಭಗವಾನ್ ಶ್ರೀ 1008 ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕು ಕಚೇರಿ ಆಡಳಿತ ಸೌಧದಲ್ಲಿ ಬೆಳ್ತಂಗಡಿ ತಹಸೀಲ್ದಾರ್ ಸುರೇಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ತಾಲೂಕು ಚುನಾವಣಾಧಿಕಾರಿ ಮಂಗಳೂರಿನ ಯೋಗೀಶ್ ರವರು ಮಾತನಾಡಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಸಂದೇಶಗಳನ್ನು ಪಾಲಿಸುವಂತೆ ಕರೆ ನೀಡಿದರು.

ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ನಗರ ಪಂಚಾಯತಿ ಮುಖ್ಯ ಅಧಿಕಾರಿ ನಟರಾಜ್, ರಾಜ್ಯ ಸರಕಾರಿ ನೌಕರ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ಕೆ. ಜಯಕೀರ್ತಿ ಜೈನ್, ಶಿಶಿಲ ಜಿನಮಂದಿರದ ಆಡಳಿತ ಸಮಿತಿಯ ಅಧ್ಯಕ್ಷ ವಿಜಯ ಕುಮಾರ್, ಸರಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಜಯರಾಜ್ ಜೈನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶ್ರೀಮತಿ ತಾರಕೇಸರಿ ನಿರೂಪಿಸಿ, ಪರಮೇಶ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Related posts

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

Suddi Udaya

ಕುಮಟಾ ಸದ್ಗುರು ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಚಾರಣೆ: ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪಾದುಕ ಪೂಜೆ

Suddi Udaya

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘ: 29ನೇ ವರ್ಷದ ವಾರ್ಷಿಕೋತ್ಸವ-ಸತ್ಯನಾರಾಯಣ ಪೂಜೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!