26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ


ಮಚ್ಚಿನ: ಬೇಸಿಗೆ ಶಿಬಿರದ ಪ್ರಯುಕ್ತ ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಇವರ ಆಶ್ರಯದಲ್ಲಿ ಜೆಸಿಐ ಘಟಕ ಮಡಂತ್ಯಾರು ಇವರ ಸಹಭಾಗಿತ್ವದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ನೆತ್ತರ ಸ.ಕಿ.ಪ್ರಾ. ಶಾಲೆಯಲ್ಲಿ ನಡೆಯಿತು.

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಮೋಹಿನಿ ಯೋಗೀಶ್ ಅಧ್ಯಕ್ಷತೆ ವಹಿಸಿದ್ದರು. ಜೆಸಿಐ ಘಟಕ ಮಡಂತ್ಯಾರು ಇದರ ಅಧ್ಯಕ್ಷ ಅಶೋಕ್ ಕುಮಾರ್ ಗುಂಡಿಯಲ್ಕೆ ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ತಿಳಿ ಹೇಳುವ ಕಾರ್ಯ ನಮ್ಮಿಂದಾಗ ಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಸುಖೇಶ್ ಬಾಬು, ಜೆಸಿಐ ನ ವಲಯಾಧಿಕಾರಿ ನವೀನ್ ಕೊಡ್ಲಕ್ಕೆ, ಯಕ್ಷಗಾನ ನಾಟ್ಯ ಗುರು ದೇವಿಪ್ರಸಾದ್ ಗುರುವಾಯನಕೆರೆ, ಶಾಲಾ ಮುಖ್ಯೋಪಾಧ್ಯಾಯ ಸೀತಾರಾಮ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಗೌರವ ಶಿಕ್ಷಕಿ ಚಿರಂಜಿನಿ ನಿರೂಪಿಸಿ ಸ್ವಾಗತಿಸಿದರು. ಶಾಲಾ ಸಹಶಿಕ್ಷಕಿ ಶ್ರೀಮತಿ ರೂಪಾ ರುಫೀನಾ ರೊಡ್ರಿಗಸ್ ಧನ್ಯವಾದವಿತ್ತರು.

Related posts

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

Suddi Udaya

ನಾಲ್ಕೂರು: ಹೃದಯಾಘಾತದಿಂದ ಜಗದೀಶ್ ಪೂಜಾರಿ ಕುದ್ರೋಟ್ಟು ನಿಧನ

Suddi Udaya
error: Content is protected !!