May 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ


ಮಚ್ಚಿನ: ಬೇಸಿಗೆ ಶಿಬಿರದ ಪ್ರಯುಕ್ತ ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಇವರ ಆಶ್ರಯದಲ್ಲಿ ಜೆಸಿಐ ಘಟಕ ಮಡಂತ್ಯಾರು ಇವರ ಸಹಭಾಗಿತ್ವದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ನೆತ್ತರ ಸ.ಕಿ.ಪ್ರಾ. ಶಾಲೆಯಲ್ಲಿ ನಡೆಯಿತು.

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಮೋಹಿನಿ ಯೋಗೀಶ್ ಅಧ್ಯಕ್ಷತೆ ವಹಿಸಿದ್ದರು. ಜೆಸಿಐ ಘಟಕ ಮಡಂತ್ಯಾರು ಇದರ ಅಧ್ಯಕ್ಷ ಅಶೋಕ್ ಕುಮಾರ್ ಗುಂಡಿಯಲ್ಕೆ ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ತಿಳಿ ಹೇಳುವ ಕಾರ್ಯ ನಮ್ಮಿಂದಾಗ ಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಸುಖೇಶ್ ಬಾಬು, ಜೆಸಿಐ ನ ವಲಯಾಧಿಕಾರಿ ನವೀನ್ ಕೊಡ್ಲಕ್ಕೆ, ಯಕ್ಷಗಾನ ನಾಟ್ಯ ಗುರು ದೇವಿಪ್ರಸಾದ್ ಗುರುವಾಯನಕೆರೆ, ಶಾಲಾ ಮುಖ್ಯೋಪಾಧ್ಯಾಯ ಸೀತಾರಾಮ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಗೌರವ ಶಿಕ್ಷಕಿ ಚಿರಂಜಿನಿ ನಿರೂಪಿಸಿ ಸ್ವಾಗತಿಸಿದರು. ಶಾಲಾ ಸಹಶಿಕ್ಷಕಿ ಶ್ರೀಮತಿ ರೂಪಾ ರುಫೀನಾ ರೊಡ್ರಿಗಸ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ಮಾ.21-24: ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

Suddi Udaya
error: Content is protected !!