28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ


ಮಚ್ಚಿನ: ಬೇಸಿಗೆ ಶಿಬಿರದ ಪ್ರಯುಕ್ತ ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಇವರ ಆಶ್ರಯದಲ್ಲಿ ಜೆಸಿಐ ಘಟಕ ಮಡಂತ್ಯಾರು ಇವರ ಸಹಭಾಗಿತ್ವದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ನೆತ್ತರ ಸ.ಕಿ.ಪ್ರಾ. ಶಾಲೆಯಲ್ಲಿ ನಡೆಯಿತು.

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಮೋಹಿನಿ ಯೋಗೀಶ್ ಅಧ್ಯಕ್ಷತೆ ವಹಿಸಿದ್ದರು. ಜೆಸಿಐ ಘಟಕ ಮಡಂತ್ಯಾರು ಇದರ ಅಧ್ಯಕ್ಷ ಅಶೋಕ್ ಕುಮಾರ್ ಗುಂಡಿಯಲ್ಕೆ ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ತಿಳಿ ಹೇಳುವ ಕಾರ್ಯ ನಮ್ಮಿಂದಾಗ ಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಸುಖೇಶ್ ಬಾಬು, ಜೆಸಿಐ ನ ವಲಯಾಧಿಕಾರಿ ನವೀನ್ ಕೊಡ್ಲಕ್ಕೆ, ಯಕ್ಷಗಾನ ನಾಟ್ಯ ಗುರು ದೇವಿಪ್ರಸಾದ್ ಗುರುವಾಯನಕೆರೆ, ಶಾಲಾ ಮುಖ್ಯೋಪಾಧ್ಯಾಯ ಸೀತಾರಾಮ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಗೌರವ ಶಿಕ್ಷಕಿ ಚಿರಂಜಿನಿ ನಿರೂಪಿಸಿ ಸ್ವಾಗತಿಸಿದರು. ಶಾಲಾ ಸಹಶಿಕ್ಷಕಿ ಶ್ರೀಮತಿ ರೂಪಾ ರುಫೀನಾ ರೊಡ್ರಿಗಸ್ ಧನ್ಯವಾದವಿತ್ತರು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಗಾಳಿ-ಮಳೆ: ಬೃಹತ್ ಮರ ಉರುಳಿ ಬಿದ್ದು, ಅಡಕೆ ಗಿಡಗಳು ಧರಾಶಾಹಿ

Suddi Udaya

ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya
error: Content is protected !!