27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

ನಿಡ್ಲೆ : ನಿಡ್ಲೆ ಗ್ರಾಮದ ಬರಂಗಾಯ ಮಜಲ್ ಮಾರು ನಿವಾಸಿ ಸಂಜೀವ ಗೌಡ ಇವರ ಪುತ್ರಿ ಕುಮಾರಿ ದೀಪಿಕಾ ಇವರಿಗೆ ಅಸ್ತಿಮಜ್ಜೆ ಶಸ್ತ್ರಚಿಕಿತ್ಸಾ ಸಹಾಯಾರ್ಥವಾಗಿ ಸ್ಪಂದನಾ ಸೇವಾ ಸಂಘದಿಂದ ರೂ. 25 ಸಾವಿರ ಮತ್ತು ನಿಡ್ಲೆ ಗ್ರಾಮದ ನೆಡಿಲು, ಗಾಣಂತಿ, ನೂಜಿಲ ಬೈಲುವಾರು ಸಮಿತಿ ವತಿಯಿಂದ ಸಂಗ್ರಹವಾದ ರೂ 5,000 ವನ್ನು ಒಟ್ಟು ಸೇರಿಸಿ ಒಟ್ಟು ರೂ.30 ಸಾವಿರದ ಚೆಕ್ಕನ್ನು ಸೀತಾರಾಮ ಗೌಡ ಸೌರಭ ಬೆಳಾಲು ಇವರ ಮೂಲಕ ಫಲಾನುಭವಿಗೆ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ವಾಣಿ ಸೌಹಾರ್ದ ಕೋ-ಅಪರೇಟೀವ್ ಸೊಸೈಟಿ ನಿರ್ದೇಶಕರಾದ ಸುರೇಶ್ ಕೌಡಂಗೆ, ಸ್ಪಂದನಾ ಸೇವಾ ಸಂಘದ ಸಂಚಾಲಕರಾದ ಮೋಹನ್ ಗೌಡ ಕೊಯ್ಯೂರು, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರುಗಳಾದ ಮಹಾಬಲ ಗೌಡ ಮತ್ತು ಶ್ರೀಮತಿ ಮೀನಾಕ್ಷಿ, ತಾಲೂಕು ಯುವ ವೇದಿಕೆಯ ನಿರ್ದೇಶಕರಾದ ನಿತಿನ್ ಗೌಡ ಕಲ್ಮಂಜ, ನಿಡ್ಲೆ ಗ್ರಾಮ ಸಮಿತಿಯ ಯುವ ವೇದಿಕೆಯ ಕಾರ್ಯದರ್ಶಿ ರಾಜೇಂದ್ರ ಗೌಡ ನಿಡ್ಲೆ, ಮಂಜು ನಿಡ್ಲೆ, ಲೋಕೇಶ್ ಅಣಿಯೂರು ಮೊದಲಾದವರು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಕೇಂದ್ರಗಳ ಭೇಟಿ

Suddi Udaya

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಕಕ್ಕಿಂಜೆ ವತಿಯಿಂದ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

Suddi Udaya

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya

ಬೆಳಾಲು ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಕಾರ್ಯಕ್ರಮ

Suddi Udaya

ನಾರಾವಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ತಯಾರಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!