May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

ನಿಡ್ಲೆ : ನಿಡ್ಲೆ ಗ್ರಾಮದ ಬರಂಗಾಯ ಮಜಲ್ ಮಾರು ನಿವಾಸಿ ಸಂಜೀವ ಗೌಡ ಇವರ ಪುತ್ರಿ ಕುಮಾರಿ ದೀಪಿಕಾ ಇವರಿಗೆ ಅಸ್ತಿಮಜ್ಜೆ ಶಸ್ತ್ರಚಿಕಿತ್ಸಾ ಸಹಾಯಾರ್ಥವಾಗಿ ಸ್ಪಂದನಾ ಸೇವಾ ಸಂಘದಿಂದ ರೂ. 25 ಸಾವಿರ ಮತ್ತು ನಿಡ್ಲೆ ಗ್ರಾಮದ ನೆಡಿಲು, ಗಾಣಂತಿ, ನೂಜಿಲ ಬೈಲುವಾರು ಸಮಿತಿ ವತಿಯಿಂದ ಸಂಗ್ರಹವಾದ ರೂ 5,000 ವನ್ನು ಒಟ್ಟು ಸೇರಿಸಿ ಒಟ್ಟು ರೂ.30 ಸಾವಿರದ ಚೆಕ್ಕನ್ನು ಸೀತಾರಾಮ ಗೌಡ ಸೌರಭ ಬೆಳಾಲು ಇವರ ಮೂಲಕ ಫಲಾನುಭವಿಗೆ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ವಾಣಿ ಸೌಹಾರ್ದ ಕೋ-ಅಪರೇಟೀವ್ ಸೊಸೈಟಿ ನಿರ್ದೇಶಕರಾದ ಸುರೇಶ್ ಕೌಡಂಗೆ, ಸ್ಪಂದನಾ ಸೇವಾ ಸಂಘದ ಸಂಚಾಲಕರಾದ ಮೋಹನ್ ಗೌಡ ಕೊಯ್ಯೂರು, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರುಗಳಾದ ಮಹಾಬಲ ಗೌಡ ಮತ್ತು ಶ್ರೀಮತಿ ಮೀನಾಕ್ಷಿ, ತಾಲೂಕು ಯುವ ವೇದಿಕೆಯ ನಿರ್ದೇಶಕರಾದ ನಿತಿನ್ ಗೌಡ ಕಲ್ಮಂಜ, ನಿಡ್ಲೆ ಗ್ರಾಮ ಸಮಿತಿಯ ಯುವ ವೇದಿಕೆಯ ಕಾರ್ಯದರ್ಶಿ ರಾಜೇಂದ್ರ ಗೌಡ ನಿಡ್ಲೆ, ಮಂಜು ನಿಡ್ಲೆ, ಲೋಕೇಶ್ ಅಣಿಯೂರು ಮೊದಲಾದವರು ಉಪಸ್ಥಿತರಿದ್ದರು.

Related posts

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ಮೇ 4: ವಿದ್ಯುತ್ ನಿಲುಗಡೆ

Suddi Udaya

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ “ಪರೀಕ್ಷಾ ಸಿದ್ಧತೆ ಕಾರ್ಯಾಗಾರ”

Suddi Udaya

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ

Suddi Udaya

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಹೆಚ್ಚಿಸಿ ಕೊಳ್ಳಬೇಕು: ಡಾ ಪ್ರಸನ್ನ ಕುಮಾರ್ ಐತಾಳ್

Suddi Udaya
error: Content is protected !!