July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ


ಬೆಳ್ತಂಗಡಿ : ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿಗೆ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಬಾಲಕಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಎ.4 ರಂದು ವರದಿಯಾಗಿದೆ.

ಲಾಯಿಲಾ ಗ್ರಾಮದ ಅಂಕಾಜೆ ಮನೆ ಸುಮಲತಾ ಎಂಬವರ ಪುತ್ರಿ ಸಾತ್ವಿಕಾ (7ವ) ಗಾಯಗೊಂಡಿದ್ದು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವಿವರ: ಎಂ.4 ರಂದು ಮಧ್ಯಾಹ್ನ ಸುಮಲತಾ ಮತ್ತು ಅವರ ಮಗಳು ಸಾತ್ವಿಕಾ ಲಾಯಿಲಾ ಗ್ರಾಮದ ಅಂಕಜೆ ಎಂಬಲ್ಲಿ ಬೆಳ್ತಂಗಡಿಗೆ ಹೋಗುವರೇ ಮಣ್ಣು ರಸ್ತೆಯಲ್ಲಿ ಆಟೋ ರಿಕ್ಷಾಕ್ಕಾಗಿ ಕಾಯುತ್ತಾ ನಿಂತಿರುವಾಗ ಸಂದರ್ಭ
ಪಡ್ಲಾಡಿ ಕಡೆಯಿಂದ ಲಾಯಿಲಾ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನವನ್ನು ಅದರ ಸವಾರ ದುಡುಕುತನದಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಿಂತಿದ್ದ ಸಾತ್ವಿಕಾಳಿಗೆ ಢಿಕ್ಕಿ ಹೊಡೆದನೆನ್ನಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸಾತ್ವಿಕಾ ಅಲ್ಲಿಯೇ ರಸ್ತೆಗೆ ಬಿದ್ದುದ್ದು, ಗಂಭೀರ ಗಾಯಗೊಂಡರೆಂದು ವರದಿಯಾಗಿದೆ. ದ್ವಿಚಕ್ರ ಸವಾರನು ದ್ವಿಚಕ್ರ ವಾಹನದೊಂದಿಗೆ ರಸ್ತೆಗೆ ಬಿದ್ದಿದ್ದ. ಗಾಯಗೊಂಡ ಸ್ವಾತಿಕಾ ಚಿಕಿತ್ಸೆ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.
ಈ ಬಗ್ಗೆ ಬೆಳ್ತಂಗಡಿ ಸಂಚಾರ ಠಾಣಾ ಅ.ಕ್ರ. 34/2023 ಕಲಂ: 279,338 ಭಾದಂ ಸಂ ಯಂತೆ ಪ್ರಕರಣ ದಾಖಲಾಗಿದೆ.

Related posts

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ: ವರಕಬೆ ಬಳಿ ಕಾರುಗಳು ಹಾಗೂ ಬೈಕ್ ನಡುವೆ ಸರಣಿ ಅಪಘಾತ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನ ಯೋಜನಾಧಿಕಾರಿ ಅವನೀಶ್ ಪಿ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ವತಿಯಿಂದ ಸನ್ಮಾನ

Suddi Udaya

ಕುವೆಟ್ಟು; ವಿಕಲಚೇತನರ ಸಮನ್ವಯ ಗ್ರಾಮಸಭೆ : ವಿಕಲಚೇತನರಿಗೆ ರೂ.2.15 ಲಕ್ಷ ನೆರವಿನ ಚೆಕ್ ವಿತರಣೆ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ನಿಸರ್ಗ ಯುವಜನೇತರ ಮಂಡಲದ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!