July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ನೂತನ ಅಧ್ಯಕ್ಷರಾಗಿ ಪ್ರಫುಲ್ಲಚಂದ್ರ ಆಯ್ಕೆ

ಕರಾಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಗುರುವಾಯನಕೆರೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಜನಜಾಗೃತಿ ವೇದಿಕೆ ಕಣಿಯೂರು ವಲಯದ ನೂತನ ವಲಯ ಅಧ್ಯಕ್ಷರ ಆಯ್ಕೆ ಸಭೆಯು ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಎ.3 ರಂದು ನಡೆಯಿತು.

ಗುರುವಾಯನಕೆರೆ ಯೋಜನಾಧಿಕಾರಿ ಯಶವಂತ್ ರವರು ಜನಜಾಗೃತಿ ವೇದಿಕೆಯ ಹುಟ್ಟು ಬೆಳವಣಿಗೆ ನಡೆದು ಬಂದ ದಾರಿ ಬಗ್ಗೆ ಪ್ರಾಸ್ತವಿಕವಾಗಿ ಮಾತನಾಡಿದರು. ದ. ಕ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ರವರು ಜನ ಜಾಗೃತಿ ಗ್ರಾಮ ಸಮಿತಿಯ ಉದ್ದೇಶ, ನವಜೀವನ ಸಮಿತಿಯ ಬಲವರ್ಧನೆಯ ಬಗ್ಗೆ ಮಾಹಿತಿ ನೀಡಿದರು.

ಕಣಿಯೂರು ವಲಯ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಪ್ರಪುಲ್ಲಚಂದ್ರ ಅಡ್ಯoತಾಯ ರವರನ್ನು ಆಯ್ಕೆ ಮಾಡಿ ಅಧಿಕಾರ ಹಸ್ತಾಂತರ ಮಾಡಲಾಯಿತು.

ಈ ಸಭೆಯಲ್ಲಿ ವಲಯಾಧ್ಯಕ್ಷ ರುಕ್ಮಯ್ಯ ಪೂಜಾರಿ, ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷೆ ಶಾರದಾ ಆರ್ ರೈ, ಮತ್ತು ಸದಸ್ಯರು, ವಲಯ ಒಕ್ಕೂಟದ ಅಧ್ಯಕ್ಷ ರಮಾನಂದ ಪೂಜಾರಿ, ಗ್ರಾಮ ಸಮಿತಿ ನವಜೀವನ ಸಮಿತಿ ಅಧ್ಯಕ್ಷರು ಹಾಗೂ ಒಕ್ಕೂಟದ ಅಧ್ಯಕ್ಷರು, ವಲಯದ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

ಸೇವಾಪ್ರತಿನಿಧಿ ಸೀತಾರಾಮ ಆಳ್ವ ರವರು ಸ್ವಾಗತಿಸಿ, ವಲಯ ಮೇಲ್ವಿಚಾರಕಿ ಪ್ರೇಮ ವಂದಿಸಿದರು.

Related posts

ನಾಲ್ಕೂರು: ಸೂಳಬೆಟ್ಟು ನಿವಾಸಿ ಪ್ರತಿಭಾ ಜೋಶಿ ನಿಧನ

Suddi Udaya

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya

ಅರಸಿನಮಕ್ಕಿ ಗ್ರಾ.ಪಂ. ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಉಜಿರೆ ನಂದ ಸ್ಟುಡಿಯೋ ಮಾಲಕ, ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ ನಿಧನ

Suddi Udaya

572 ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ: ವಿದ್ಯಾಮಾತಾ ಅಕಾಡೆಮಿಯಿಂದ ತರಬೇತಿ ಪ್ರಾರಂಭ: ಪಿಯುಸಿ ಮುಗಿಸಿರುವಂತಹ ಅಭ್ಯರ್ಥಿಗಳಿಗೆ ಅತ್ಯುತ್ತಮ ಅವಕಾಶ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya
error: Content is protected !!