April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ


ಬೆಳ್ತಂಗಡಿ : ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿಗೆ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಬಾಲಕಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಎ.4 ರಂದು ವರದಿಯಾಗಿದೆ.

ಲಾಯಿಲಾ ಗ್ರಾಮದ ಅಂಕಾಜೆ ಮನೆ ಸುಮಲತಾ ಎಂಬವರ ಪುತ್ರಿ ಸಾತ್ವಿಕಾ (7ವ) ಗಾಯಗೊಂಡಿದ್ದು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವಿವರ: ಎಂ.4 ರಂದು ಮಧ್ಯಾಹ್ನ ಸುಮಲತಾ ಮತ್ತು ಅವರ ಮಗಳು ಸಾತ್ವಿಕಾ ಲಾಯಿಲಾ ಗ್ರಾಮದ ಅಂಕಜೆ ಎಂಬಲ್ಲಿ ಬೆಳ್ತಂಗಡಿಗೆ ಹೋಗುವರೇ ಮಣ್ಣು ರಸ್ತೆಯಲ್ಲಿ ಆಟೋ ರಿಕ್ಷಾಕ್ಕಾಗಿ ಕಾಯುತ್ತಾ ನಿಂತಿರುವಾಗ ಸಂದರ್ಭ
ಪಡ್ಲಾಡಿ ಕಡೆಯಿಂದ ಲಾಯಿಲಾ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನವನ್ನು ಅದರ ಸವಾರ ದುಡುಕುತನದಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಿಂತಿದ್ದ ಸಾತ್ವಿಕಾಳಿಗೆ ಢಿಕ್ಕಿ ಹೊಡೆದನೆನ್ನಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸಾತ್ವಿಕಾ ಅಲ್ಲಿಯೇ ರಸ್ತೆಗೆ ಬಿದ್ದುದ್ದು, ಗಂಭೀರ ಗಾಯಗೊಂಡರೆಂದು ವರದಿಯಾಗಿದೆ. ದ್ವಿಚಕ್ರ ಸವಾರನು ದ್ವಿಚಕ್ರ ವಾಹನದೊಂದಿಗೆ ರಸ್ತೆಗೆ ಬಿದ್ದಿದ್ದ. ಗಾಯಗೊಂಡ ಸ್ವಾತಿಕಾ ಚಿಕಿತ್ಸೆ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.
ಈ ಬಗ್ಗೆ ಬೆಳ್ತಂಗಡಿ ಸಂಚಾರ ಠಾಣಾ ಅ.ಕ್ರ. 34/2023 ಕಲಂ: 279,338 ಭಾದಂ ಸಂ ಯಂತೆ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

Suddi Udaya

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!