25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ


ಬೆಳ್ತಂಗಡಿ : ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿಗೆ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಬಾಲಕಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಎ.4 ರಂದು ವರದಿಯಾಗಿದೆ.

ಲಾಯಿಲಾ ಗ್ರಾಮದ ಅಂಕಾಜೆ ಮನೆ ಸುಮಲತಾ ಎಂಬವರ ಪುತ್ರಿ ಸಾತ್ವಿಕಾ (7ವ) ಗಾಯಗೊಂಡಿದ್ದು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವಿವರ: ಎಂ.4 ರಂದು ಮಧ್ಯಾಹ್ನ ಸುಮಲತಾ ಮತ್ತು ಅವರ ಮಗಳು ಸಾತ್ವಿಕಾ ಲಾಯಿಲಾ ಗ್ರಾಮದ ಅಂಕಜೆ ಎಂಬಲ್ಲಿ ಬೆಳ್ತಂಗಡಿಗೆ ಹೋಗುವರೇ ಮಣ್ಣು ರಸ್ತೆಯಲ್ಲಿ ಆಟೋ ರಿಕ್ಷಾಕ್ಕಾಗಿ ಕಾಯುತ್ತಾ ನಿಂತಿರುವಾಗ ಸಂದರ್ಭ
ಪಡ್ಲಾಡಿ ಕಡೆಯಿಂದ ಲಾಯಿಲಾ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನವನ್ನು ಅದರ ಸವಾರ ದುಡುಕುತನದಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಿಂತಿದ್ದ ಸಾತ್ವಿಕಾಳಿಗೆ ಢಿಕ್ಕಿ ಹೊಡೆದನೆನ್ನಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸಾತ್ವಿಕಾ ಅಲ್ಲಿಯೇ ರಸ್ತೆಗೆ ಬಿದ್ದುದ್ದು, ಗಂಭೀರ ಗಾಯಗೊಂಡರೆಂದು ವರದಿಯಾಗಿದೆ. ದ್ವಿಚಕ್ರ ಸವಾರನು ದ್ವಿಚಕ್ರ ವಾಹನದೊಂದಿಗೆ ರಸ್ತೆಗೆ ಬಿದ್ದಿದ್ದ. ಗಾಯಗೊಂಡ ಸ್ವಾತಿಕಾ ಚಿಕಿತ್ಸೆ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.
ಈ ಬಗ್ಗೆ ಬೆಳ್ತಂಗಡಿ ಸಂಚಾರ ಠಾಣಾ ಅ.ಕ್ರ. 34/2023 ಕಲಂ: 279,338 ಭಾದಂ ಸಂ ಯಂತೆ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಸೈಂಟ್ ಮಿಲಾಗ್ರಿಸ್ ಸೊಸೈಟಿ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬೆಡ್ ಶೀಟ್, ಟವಲ್ ವಿತರಣೆ

Suddi Udaya

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕನ್ಯಾಡಿ ಸೇವಾಭಾರತಿಗೆ ಮಂಗಳೂರು ಸಿ.ಆರ್ 3 ಕಂಪೆನಿಯಿಂದ ರೂ. 5 ಲಕ್ಷ ದೇಣಿಗೆ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ

Suddi Udaya

ನಾಗರಿಕ ಯುವಜನ ವೇದಿಕೆಯಿಂದ ಯೂತ್ ಸಿವಿಲ್ ಫಾರಂ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya
error: Content is protected !!