September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ


ಬೆಳ್ತಂಗಡಿ : ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿಗೆ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಬಾಲಕಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಎ.4 ರಂದು ವರದಿಯಾಗಿದೆ.

ಲಾಯಿಲಾ ಗ್ರಾಮದ ಅಂಕಾಜೆ ಮನೆ ಸುಮಲತಾ ಎಂಬವರ ಪುತ್ರಿ ಸಾತ್ವಿಕಾ (7ವ) ಗಾಯಗೊಂಡಿದ್ದು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವಿವರ: ಎಂ.4 ರಂದು ಮಧ್ಯಾಹ್ನ ಸುಮಲತಾ ಮತ್ತು ಅವರ ಮಗಳು ಸಾತ್ವಿಕಾ ಲಾಯಿಲಾ ಗ್ರಾಮದ ಅಂಕಜೆ ಎಂಬಲ್ಲಿ ಬೆಳ್ತಂಗಡಿಗೆ ಹೋಗುವರೇ ಮಣ್ಣು ರಸ್ತೆಯಲ್ಲಿ ಆಟೋ ರಿಕ್ಷಾಕ್ಕಾಗಿ ಕಾಯುತ್ತಾ ನಿಂತಿರುವಾಗ ಸಂದರ್ಭ
ಪಡ್ಲಾಡಿ ಕಡೆಯಿಂದ ಲಾಯಿಲಾ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನವನ್ನು ಅದರ ಸವಾರ ದುಡುಕುತನದಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಿಂತಿದ್ದ ಸಾತ್ವಿಕಾಳಿಗೆ ಢಿಕ್ಕಿ ಹೊಡೆದನೆನ್ನಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸಾತ್ವಿಕಾ ಅಲ್ಲಿಯೇ ರಸ್ತೆಗೆ ಬಿದ್ದುದ್ದು, ಗಂಭೀರ ಗಾಯಗೊಂಡರೆಂದು ವರದಿಯಾಗಿದೆ. ದ್ವಿಚಕ್ರ ಸವಾರನು ದ್ವಿಚಕ್ರ ವಾಹನದೊಂದಿಗೆ ರಸ್ತೆಗೆ ಬಿದ್ದಿದ್ದ. ಗಾಯಗೊಂಡ ಸ್ವಾತಿಕಾ ಚಿಕಿತ್ಸೆ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.
ಈ ಬಗ್ಗೆ ಬೆಳ್ತಂಗಡಿ ಸಂಚಾರ ಠಾಣಾ ಅ.ಕ್ರ. 34/2023 ಕಲಂ: 279,338 ಭಾದಂ ಸಂ ಯಂತೆ ಪ್ರಕರಣ ದಾಖಲಾಗಿದೆ.

Related posts

ಬಜಿಲ ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ, ಪೋಷಕರಿಂದ ಮಾದರಿ ಶಾಲಾ ಕೈತೋಟ ನಿರ್ಮಾಣ

Suddi Udaya

ಸುಲ್ಕೇರಿ ಗ್ರಾ.ಪಂ ನಲ್ಲಿ ವಿಶೇಷ ಚೇತನರ ಸಮನ್ವಯ ಸಭೆ

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya

ಮೇಲಂತಬೆಟ್ಟು: ಪಕ್ಕಿದಕಲ ನವೋದಯ ಯುವಕ & ಯುವತಿ ಮಂಡಲದ 27ನೇ ವರ್ಷದ ಸಾರ್ವಜನಿಕ ಆಟೋಟ ಸ್ಪರ್ಧೆ ಹಾಗೂ ಮೋಟೋಕ್ರಾಸ್ 2025 ಪೋಸ್ಟರ್ ಬಿಡುಗಡೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಸಭೆ: ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Suddi Udaya

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

Suddi Udaya
error: Content is protected !!