ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂರವರ 116 ನೇ ಜನ್ಮ ದಿನಾಚರಣೆ

Suddi Udaya

ಬೆಳ್ತಂಗಡಿ: ಹಸಿರು ಕ್ರಾಂತಿಯ ಹರಿಕಾರ ಡಾl ಬಾಬು ಜಗಜೀವನರಾಂ ಇವರ 116 ನೇ ಜನ್ಮ ದಿನಾಚರಣೆಯನ್ನು ಬೆಳ್ತಂಗಡಿ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಎ.5ರಂದು ಆಚರಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣ ಅಧಿಕಾರಿ ಕುಸುಮಾಧರ್ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಟರಾಜ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಹೇಮಚಂದ್ರ, ತಾಲೂಕು ಕಚೇರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಪವಾಡಪ್ಪ ದೊಡ್ಡಮನಿ ಕಂದಾಯ ನಿರೀಕ್ಷಕರು ಇವರು ಬಾಬು ಜಗಜೀವನ ರಾಂ ಇವರ ಜೀವನ ಚರಿತ್ರೆ ಮತ್ತು ಆದರ್ಶಗಳ ಕುರಿತು ಮಾತನಾಡಿದರು.
ಶ್ರೀಮತಿ ಹೇಮಲತ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಶ್ರೀಮತಿ ತಾರಕೇಸರಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು ವಂದಿಸಿದರು.

Leave a Comment

error: Content is protected !!