25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ನಾರಾವಿ: ಮಾಂಡೋವಿ ಮೋಟಾರ್‍ಸ್ ನಾರಾವಿ ಶಾಖೆಯ ಉದ್ಘಾಟನೆ

ನಾರಾವಿ: ಇಲ್ಲಿಯ ಅರಸಿಕಟ್ಟೆಯಲ್ಲಿ ಮಾಂಡೋವಿ ಮೋಟಾರ್‍ಸ್ ಪ್ರೈ.ಲಿ. ಇದರ ನೂತನ ಶಾಖೆಯು ನಾರಾವಿಯ ಅರಸಿಕಟ್ಟೆಯಲ್ಲಿ ಎ. 6ರಂದು ಉದ್ಘಾಟನೆಗೊಂಡಿತು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ಮುಖ್ಯ ಅತಿಥಿಗಳಾಗಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾ,ರೆ. ನಾರಾವಿ ಸೈಂಟ್ ಆಂತೋನಿ ಚರ್ಚ ನ ರೆ. ಫಾ.ಸೈಮೋನ್ ಡಿಸೋಜ,ಹೊಸ್ಮಾರು ಎಸ್.ಎಂ.ಜೆ. ಕೆ.ಎಂ.ಮಹಮ್ಮದ್ ಸ್ವಾಲಿಹ ಲತೀಫ್, ನಾರಾವಿ ಉದ್ಯಮಿ ವಸಂತ ಭಟ್, ಮಾಂಡೋವಿ ಸಂಸ್ಥೆಯ ಚೆಯರ್ ಮೆನ್ ಆರೂರು ಕಿಶೋರ್ ರಾವ್, ಡೈರೆ ಆರೂರು ಸಂಜಯ್ ರಾವ್, ಮಾರುತಿ ಏರಿಯಾ ಮ್ಯಾನೇಜರ್ ಸರ್ವಿಸ್ ಸಾರಂಗ್ ಬನ್ಸಲ್, ಟಿ.ಎಸ್.ಎಂ ಮಾರುತಿ ಗೊವೀಂದ ರಾಜ್,ಎವಿಪಿ ನೆರೆಂಕಿ ಪಾರ್ಶ್ವನಾಥ ಜೈನ್, ಡಿಜಿಎಂ ಸೇಲ್ಸ್ ಶಶಿಧರ ಕಾರಂತ, ಸೀನಿಯರ್ ಜನರಲ್ ಮ್ಯಾನೇಜರ್ ಉಮೇಶ್, ಸ್ಥಳದ ಮಾಲಕರಾದ ರೋಶನ್ ಹೆಗ್ಡೆ, ಹಾಗೂ ಮಾರುತಿ ಸುಜುಕೀ ಹಾಗೂ ಮಾಂಡವೀ ಮೋಟಾರ್ಸ್ನ್ ನ ಎಲ್ಲಾ ಬ್ರಾಂಚ್ ನ ವ್ಯವಸ್ಥಾಪಕ, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಎಎಸ್ಎಂ ಮುರಳೀದರ್ ಸ್ವಾಗತಿಸಿ, ವಂದಿಸಿದರು.

ಗ್ರಾಹಕರಿಗೆ ಉತ್ತಮ ಸೇವೆಯನ್ನು ಒದಗಿಸುತ್ತಾ ಬಂದಿರುವ ಮಾಂಡೋವಿ ಮೋಟಾರ್‍ಸ್‌ನ ಇದು 40ನೇ ಶಾಖೆಯಾಗಿದೆ.

ರಾಜ್ಯದ ಅತೀದೊಡ್ಡ ಡೀಲರ್‌ಶಿಪ್ ಹೊಂದಿರುವ ಸಂಸ್ಥೆ
ಮಾಂಡೋವಿ ಮೋಟಾರ್ಸ್ ಪ್ರೈ.ಲಿ. 1984ರಲ್ಲಿ ರಾಜ್ಯದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಮಾರುತಿ ಸುಜುಕಿ ಕಾರ್‌ಗಳ ಕರ್ನಾಟಕದ ಮೊದಲ ಮತ್ತು ಅತಿ ದೊಡ್ಡ ಡೀಲರ್‌ಶಿಪ್ ಆಗಿದೆ. ಇದರ ಮೂಲ ಕಂಪನಿಯು ಆಟೋಮೋಟಿವ್ ಉದ್ಯಮದಲ್ಲಿ ಸುಮಾರು 100 ವರ್ಷಗಳ ಅನುಭವವನ್ನು ಹೊಂದಿದೆ. ಕಂಪನಿಯು ತಾನು ಮಾಡುವ ಎಲ್ಲದರಲ್ಲೂ ಉತ್ಕೃಷ್ಟತೆಯನ್ನು ಹೊಂದಿದೆ. ಇದು ಸುಮಾರು 37 ವರ್ಷಗಳ ಡೀಲರ್‌ಶಿಪ್ ವ್ಯವಹಾರದಲ್ಲಿ, ‘ಮಾಂಡೋವಿ’ ಎಂಬ ಹೆಸರನ್ನು ಮಾರುತಿ ಸುಜುಕಿಯೊಂದಿಗೆ ಏಕರೂಪವಾಗಿ ಗುರುತಿಸಲಾಗಿದೆ ಮತ್ತು ಇದು ಕಾರ್ಯಕ್ಷಮತೆಯಲ್ಲಿ ಅತ್ಯುತ್ತಮವಾದವುಗಳಲ್ಲಿ ಒಂದಾಗಿದೆ. ಗ್ರಾಹಕರ ತೃಪ್ತಿಗೆ ಪ್ರಾಧಾನ್ಯತೆ ನೀಡುವ ಸಂಸ್ಥೆಯು ತನ್ನ ಕಾರುಗಳ ಗುಣಮಟ್ಟವನ್ನು ಹೆಚ್ಚಿಸಲು ನಿರಂತರವಾಗಿ ಗುರಿಯನ್ನು ಹೊಂದಿದೆ. ಈ ಮೂಲಕ ಗ್ರಾಹಕರ ವಿಶ್ವಾಸ ಗಳಿಸಿದೆ.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya

ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2026 ಸ್ವೀಕರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ ಮರಳುಗಾರಿಕೆ: ಕಾನೂನು ಕ್ರಮಕ್ಕೆ ಎಸ್ ಡಿಪಿಐ ಆಗ್ರಹ

Suddi Udaya

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

Suddi Udaya
error: Content is protected !!