23.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿಜಿಲ್ಲಾ ಸುದ್ದಿ

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

ನೆರಿಯ: ಕಳೆದೈದು ವರ್ಷಗಳಿಂದ ಶಿಕ್ಷಣಕ್ಕೆ ರಾಜ್ಯ ಸರಕಾರದ ಮಹತ್ವರ ಕೊಡುಗೆಗಳನ್ನು ನೀಡಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತಾದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯವಿದೆ. ವಿಶೇಷವಾಗಿ ಹಿಂದುಳಿದ ಜನಾಂಗದ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡುವ ನೆಲೆಯಲ್ಲಿ ಸರಕಾರ ಆಶ್ರಯ ಶಾಲೆಗಳ ಸ್ಥಾಪನೆಗೆ ಉತ್ತೇಜನ ನೀಡಿದೆ. ಬೆಳ್ತಂಗಡಿ ತಾಲೂಕಿನಲ್ಲೂ ಶಾಲಾ, ಕಾಲೇಜುಗಳ ಕಟ್ಟಡ ರಚನೆ ಹಾಗೂ ದುರಸ್ತಿಗೆ ಅತೀ ಹೆಚ್ಚು ಅನುದಾನ ಒದಗಿಸಿದ್ದೇನೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.


ಅವರು ಇತ್ತೀಚೆಗೆ ನೆರಿಯದ ಆಲಂಗಾಯಿಯಲ್ಲಿ ರೂ. 5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿ, ವಸತಿ, ಆಶ್ರಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಪೂರಕ ವಾತಾವರಣ ದೊರಕುತ್ತದೆ ಎಂದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್‌ಸಿಂಹ ನಾಯಕ್, ನೆರಿಯ ಗ್ರಾ.ಪಂ. ಅಧ್ಯಕ್ಷೆ ವಸಂತಿ, ಉಪಾಧ್ಯಕ್ಷೆ ಕುಶಲಾ, ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಹೇಮಚಂದ್ರ, ಗಿರಿಜನ ಕಲ್ಯಾಣ ವಿಸ್ತರಣಾಧಿಕಾರಿ ಹೇಮಲತಾ, ನೆರಿಯ ಗ್ರಾ.ಪಂ. ಸದಸ್ಯರಾದ ಬಾಬು ಗೌಡ ಪರ್ಪಲ, ಮಾಲತಿ, ಸವಿತಾ, ಸಚಿನ್, ಸಜಿತಾ, ಮರಿಯಮ್ಮ, ವಿಶ್ವನಾಥ ಗೌಡ, ಶಾಲಾ ಮುಖ್ಯ ಶಿಕ್ಷಕ ಕೃಷ್ಣಪ್ಪ, ಸ್ಥಳೀಯ ಪ್ರಮುಖರಾದ ಎಂ.ಜಿ. ವರ್ಗೀಸ್, ಅಜಯ್ ಕಲಿಕಟ್, ಬೂತ್ ಸಮಿತಿ ಅಧ್ಯಕ್ಷ ಸಂದೀಪ್, ಕಾಂತಪ್ಪ ಆಲಂಗಾಯಿ, ಹರೀಶ್ ಆಲಂಗಾಯಿ, ಹರಿಪ್ರಸಾದ್ ಆಲಂಗಾಯಿ, ನೆರಿಯ ಶಕ್ತಿಕೇಂದ್ರದ ಅಧ್ಯಕ್ಷ ವಿಶ್ವನಾಥ ಹಾಗೂ ಊರಿನ ಗ್ರಾಮಸ್ಥರು ಇತರರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಕೇಕ್ ಕತ್ತರಿಸಿ ಸಂಭ್ರಮಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ. 97.29 ಫಲಿತಾಂಶ

Suddi Udaya

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

Suddi Udaya
error: Content is protected !!