September 6, 2026
ಅಪರಾಧ ಸುದ್ದಿ

ಪಟ್ರಮೆ ಪಟ್ಟೂರಿನ ನೆರೆಕರೆಯ ಇಬ್ಬರು ಯುವತಿಯರು ಮೃತ್ಯು: ಆತ್ಮಹತ್ಯೆ ಮಾಡಿಕೊಂಡ ಶಂಕೆ : ಮುಂದುವರಿದ ಪೊಲೀಸರ ತನಿಖೆ

ರಕ್ಷಿತಾ

ಲಾವಣ್ಯ

ಪಟ್ರಮೆ : ಹೊಟ್ಟೆನೋವಿನಿಂದ ನರಳಿ ಆಸ್ಪತ್ರೆಗೆ ದಾಖಲಾದ ನೆರೆಕರೆಯ ಮನೆಯ ಇಬ್ಬರು ಯುವತಿಯರು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.

ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ ( 22ವ) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಮೃತಪಟ್ಟರೆ, ಅವರ ಮನೆರೆಯಮನೆಯವರಾದ ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21ವ) ಸುರತ್ಕಲ್ ಆಸ್ಪತ್ರೆಯಲ್ಲಿ ಮಧ್ಯಾಹ್ನ ಮೃತಪಟ್ಟರೆನ್ನಲಾಗಿದೆ. ಇವರಿಬ್ಬರು ಸೇವಾ ಪ್ರತಿನಿಧಿಯಾಗಿ ಕೆಲ ಸಮಯಗಳಿಂದ ಕಾರ್ಯವನ್ನು ನಿರ್ವಹಿಸುತ್ತಿದ್ದರು.
ಎ.4ರಂದು ಸಂಜೆ ರಕ್ಷಿತಾ ಮತ್ತು ಲಾವಣ್ಯ ತಮ್ಮ ಮನೆಯಲ್ಲಿ ಹೊಟ್ಟೆ ನೋವೆಂದು ನರಳಾಡಿ ತೀವ್ರ ಅಸ್ವಸ್ಥಗೊಂಡಿದ್ದರು. ಇವರಿಬ್ಬರನ್ನು ಸ್ಥಳೀಯರ ಸಹಕಾರದಲ್ಲಿ ನೆಲ್ಯಾಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ರಕ್ಷಿತಾ ಅವರನ್ನು ಅವರ ಮನೆಯವರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು. ಲಾವಣ್ಯರನ್ನು ಅವರ ಮನೆಯವರು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಯ ವೈದ್ಯರ ಸಲಹೆಯಂತೆ ಸುರತ್ಕಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಕ್ಷಿತಾ ಅವರು ಎ.6 ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಲಾವಣ್ಯ ಇಂದು ಮಧ್ಯಾಹ್ನ ಸುರತ್ಕಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇವರಿಬ್ಬರೂ ಪಟ್ಟೂರಿನಲ್ಲಿ ನೆರೆಕರೆಯವರೋಗಿದ್ದ. ಇವರ ಸಾವಿಗೆ ಕಾರಣ ಏನು ಕಾರಣ ಎಂದು ಸ್ವಷ್ಟಗೊಂಡಿಲ್ಲ. ಈ ಬಗ್ಗೆ ವೈದ್ಯಕೀಯ ವರದಿ ಬಂದ ನಂತರವಷ್ಟೇ ತಿಳಿದು ಬರಬೇಕಾಗಿದೆ. ಇವರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರ
ಬಹುದೆಂದು ಶಂಕಿಸಲಾಗಿದೆ.
ಪೊಲೀಸ್ ರು ತನಿಖೆ ನಡೆಸುತ್ತಿದ್ದು, ಸ್ವಷ್ಟ ಕಾರಣ ಬೆಳಕಿಗೆ ಬರಬೇಕಾಗಿದೆ.

Related posts

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya
error: Content is protected !!