25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

ಬೆಳ್ತಂಗಡಿ : ನೆತ್ತಿ ಸುಡುವ ಬಿಸಿಲಿನ ಬೇಗೆಗೆ ಬಾಯಾರಿ ಬರುವ ಸಾರ್ವಜನಿಕರಿಗೆ ರೆಡ್ ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳ ತಂಡ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಎ.7 ರಂದು ಉಚಿತ ಮಜ್ಜಿಗೆ ವಿತರಿಸುವ ಮೂಲಕ ನಾಗರಿಕರ ಶ್ಲಾಘನೆಗೆ ಪಾತ್ರವಾಗಿದೆ.

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಶುಚಿ ರುಚಿಯಾದ ಮಜ್ಜಿಗೆ ನೀಡಿ ನಾಗರಿಕರ ಗಮನ ಸೆಳೆದಿದೆ.ನೆತ್ತಿ ಸುಡುವ ಉರಿ ಬಿಸಿಲಿಗೆ ಬಿಸಿಗಾಳಿ ಜೊತೆಗೆ ಭೂಮಿಯೇ ಧಗಧಗಿಸುವ ರೀತಿಯಲ್ಲಿ ಬರಿಗಾಲಲ್ಲಿ ನಡೆದಾಡಲಾಗದ ಪರಿಸ್ಥಿತಿ ಇರುವಾಗ ರೆಡ್ ಕ್ರಾಸ್ ಸಂಸ್ಥೆಯ ತಂಡ ಪೇಟೆಗೆ ಬಂದವರ ಬಾಯಾರಿಕೆ ತಣಿಸುವ ಕಾಳಜಿಯೊಂದಿಗೆ ಲೋಟದಲ್ಲಿ ತಂಪು ಮಜ್ಜಿಗೆ ಹಂಚುವ ಸಾಂಕೇತಿಕವಾದ ವಿಶಿಷ್ಟ ಕಾರ್ಯಕ್ರಮ ಆಯೋಜಿಸಿರುವುದಕ್ಕೆ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭ ರೆಡ್‌ ಕ್ರಾಸ್ ಸಂಸ್ಥೆ ಅಧ್ಯಕ್ಷ ಹರಿಪ್ರಸಾದ್, ಕಾರ್ಯದರ್ಶಿ ಯಶವಂತ ಪಟವರ್ಧನ್, ಸದಸ್ಯರಾದ ಸುಕನ್ಯಾ, ಪರಿಮಳಾ, ಸುಜಿತ್ ಪುಟಾಣಿ ಆರುಷಿ ಇದ್ದರು.

Related posts

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya
error: Content is protected !!