July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

ಬೆಳ್ತಂಗಡಿ : ನೆತ್ತಿ ಸುಡುವ ಬಿಸಿಲಿನ ಬೇಗೆಗೆ ಬಾಯಾರಿ ಬರುವ ಸಾರ್ವಜನಿಕರಿಗೆ ರೆಡ್ ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳ ತಂಡ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಎ.7 ರಂದು ಉಚಿತ ಮಜ್ಜಿಗೆ ವಿತರಿಸುವ ಮೂಲಕ ನಾಗರಿಕರ ಶ್ಲಾಘನೆಗೆ ಪಾತ್ರವಾಗಿದೆ.

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಶುಚಿ ರುಚಿಯಾದ ಮಜ್ಜಿಗೆ ನೀಡಿ ನಾಗರಿಕರ ಗಮನ ಸೆಳೆದಿದೆ.ನೆತ್ತಿ ಸುಡುವ ಉರಿ ಬಿಸಿಲಿಗೆ ಬಿಸಿಗಾಳಿ ಜೊತೆಗೆ ಭೂಮಿಯೇ ಧಗಧಗಿಸುವ ರೀತಿಯಲ್ಲಿ ಬರಿಗಾಲಲ್ಲಿ ನಡೆದಾಡಲಾಗದ ಪರಿಸ್ಥಿತಿ ಇರುವಾಗ ರೆಡ್ ಕ್ರಾಸ್ ಸಂಸ್ಥೆಯ ತಂಡ ಪೇಟೆಗೆ ಬಂದವರ ಬಾಯಾರಿಕೆ ತಣಿಸುವ ಕಾಳಜಿಯೊಂದಿಗೆ ಲೋಟದಲ್ಲಿ ತಂಪು ಮಜ್ಜಿಗೆ ಹಂಚುವ ಸಾಂಕೇತಿಕವಾದ ವಿಶಿಷ್ಟ ಕಾರ್ಯಕ್ರಮ ಆಯೋಜಿಸಿರುವುದಕ್ಕೆ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭ ರೆಡ್‌ ಕ್ರಾಸ್ ಸಂಸ್ಥೆ ಅಧ್ಯಕ್ಷ ಹರಿಪ್ರಸಾದ್, ಕಾರ್ಯದರ್ಶಿ ಯಶವಂತ ಪಟವರ್ಧನ್, ಸದಸ್ಯರಾದ ಸುಕನ್ಯಾ, ಪರಿಮಳಾ, ಸುಜಿತ್ ಪುಟಾಣಿ ಆರುಷಿ ಇದ್ದರು.

Related posts

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಪ್ರಬಂಧ ಸ್ಪರ್ಧೆ: ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮೇ 26: ಯೂತ್ ಮತ್ತು ಸಾಮಾಜಿಕ ಕಾಳಜಿಗಳ ಕುರಿತು ರಾಷ್ಟ್ರೀಯ ಸಮ್ಮೇಳನ “ಸಂಭ್ರಮ-2023”

Suddi Udaya

ವೆನ್ಲಾಕ್‌ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ

Suddi Udaya

ಗುಡ್ಡ ಕುಸಿತದಂಥ ಪ್ರಕರಣ ಮತ್ತು ತಜ್ಞರ ಅಧ್ಯಯನ ವರದಿಗಳು ಭೂಕುಸಿತದ ಘೋರ ಪರಿಣಾಮಗಳನ್ನು ಜನರ ಮುಂದಿಟ್ಟಿದ್ದು ಯೋಜನೆಯನ್ನು ಮತ್ತೊಮ್ಮೆ ಪರಿಶೀಲಿಸುವಂತೆ ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ರವರಿಂದ ಸಭಾಪತಿಗಳಿಗೆ ಮನವಿ

Suddi Udaya

ಎಕ್ಸೆಲ್ ಕಾಲೇಜಿನಿಂದ ಗುರುವಾಯನಕೆರೆ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಶಾಲೆಯ ವತಿಯಿಂದ ಸನ್ಮಾನ

Suddi Udaya
error: Content is protected !!