23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

ಶಿಶಿಲ : ಅದೊಂದು ಅಪರೂಪದ ‌ಕಾರ್ಯಕ್ರಮ. ಪ್ರತೀವರ್ಷ ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನೂಮ ಜಯಂತಿಯಂದು ಭಜನೆ, ಅನ್ನದಾನ, ರಾಮಾಯಣ ಗ್ರಂಥಪೂಜೆ, ರಾಮಾಯಣ ಕಥೆ ನಿರಂತರ ನಡೆದುಕೊಂಡು ಬರುತ್ತಿದೆ.

ಹನುಮ ಜಯಂತಿ ಈ ರೀತಿಯ‌ ಕಾರ್ಯಕ್ರಮ ನಾನು ಪ್ರಥಮ ಬಾರಿ ನೋಡುತ್ತಿದ್ದೆನೆ. ಧಾರ್ಮಿಕ ಕಾರ್ಯ, ಧರ್ಮ ಜಾಗ್ರತಿ ಮೂಡಿಸುತ್ತಿರುವ ಈ ಮನೆಯ ಸೇವಾ ಕಾರ್ಯಕ್ಕೆ‌ ಅಭಿನಂದನೆ. ಎಂದು ಬೆಂಗಳೂರು, ದಾವಣಗೆರೆ ವಿಪ್ರ ಸಾಮ್ರಾಜ್ಯದ ನಿರ್ದೆಶಕರಾದ ವೆ.ಮೂ ಶ್ರೀ ರಾಘವೇಂದ್ರ ಆಚಾರ್ಯ ನುಡಿದರು.

ಅವರು ಶಿಶಿಲ ಶಿವಕೀರ್ತಿ ನಿಲಯದಲ್ಲಿ ನಡೆದ‌ ಹನೂಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನುಡಿದಿದ್ದರು,
ಇವರ ಧಾರ್ಮಿಕ ಸೇವಾ ಕಾರ್ಯ ಗುರುತಿಸಿದ ವಿಪ್ರ ಸಮೂಹ ಸಂಸ್ಥೆ ಬೆಂಗಳೂರಿನ ನಿರ್ದೆಶಕರಾದ ಶ್ರೀ ವೆ.ಬ್ರಹ್ಮ ರಾಘವೇಂದ್ರ ಆಚಾರ್ಯ ಮತ್ತು ಶ್ರೀ ರಾಘವೇಂದ್ರ ಮಾದಾಪುರ ಇವರು ಹನೂಮ ‌ಜಯಂತಿ ಶುಭ ಸಂಧರ್ಭದಲ್ಲಿ ಶ್ರೀ ಬಿ.ಜಯರಾಮ ನೆಲ್ಲಿತ್ತಾಯರಿಗೆ ತಮ್ಮ ಸಂಸ್ಥೆ ವತಿಯಿಂದ ” ಭಜನಾ ಭಾಸ್ಕರ” ಎಂಬ ಪ್ರಶಸ್ತಿ ಪ್ರಸ್ತಾಪವನ್ನು ಮಂಡಿಸಿದರು.

ಮುಂದಿನ ದಿನದಲ್ಲಿ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ.
ಕಾರ್ಯಕ್ರಮದಲ್ಲಿ ಶ್ರೀ ರಾಮಕೃಷ್ಣ ‌ಕಾಟುಕುಕ್ಕೆ, ಶ್ರೀ ಸುಂದರ ಬಿಳಿನೆಲೆ, ಶ್ರೀ ರಾಘವೇಂದ್ರ ಕಿಗ್ಗ, ಶ್ರೀ ಶ್ರೀನಿವಾಸ‌ ಮೂಡೆತ್ತಾಯ ಮುಂತಾದ ಗಣ್ಯರು ಉಪಸ್ಥಿತರಿದ್ದರು. ‌
ಇದೆ ಸಂಧರ್ಭದಲ್ಲಿ ಶ್ರೀ ಜಯರಾಮ ನೆಲ್ಲಿತ್ತಾಯ ದಂಪತಿಗಳನ್ನು ವಿಪ್ರ ಸಮೂಹ ಸಂಸ್ಥೆ ಬೆಂಗಳೂರು ವತಿಯಿಂದ ಅಭಿನಂದಿಸಲಾಗಿತ್ತು.

Related posts

ಕುಂಭಶ್ರೀ ಪಿಯು ಕಾಲೇಜಿನಲ್ಲಿ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರ

Suddi Udaya

ಉಜಿರೆಯ ಎಸ್ ಡಿ ಎಂ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಜೇಸಿಐ ವಿದ್ಯಾರ್ಥಿ ವೇತನ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

Suddi Udaya

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya
error: Content is protected !!