September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

ನಾರಾವಿ: ಸೂರ್ಯನಾರಾಯಣ ದೇವಸ್ಥಾನದಲ್ಲಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆಯು ನಡೆಯಿತು.

ಈ ಸಭೆಯಲ್ಲಿ ಜನಜಾಗೃತಿ ವಲಯಾಧ್ಯಕ್ಷರಾದ ನಿತ್ಯಾನಂದ ನಾವರ, ತಾಲೂಕು ಯೋಜನಾಧಿಕಾರಿ ಯಶವಂತ್ ಸರ್, ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸದಾನಂದ ಬಂಗೇರ, ಹಾಗೂ ತಾಲೂಕು ಜನಜಾಗೃತಿ ಸಮಿತಿಯ ಸದಸ್ಯರಾದ ಮೋಹನ್ ಅಂಡಿಂಜೆ, ಸದಾನಂದ ಗೌಡ, ಜಯರಾಜ್ ಹೆಗ್ಡೆ , ವಲಯದ ಮೇಲ್ವಿಚಾರಕರಾದ ದಮಯಂತಿ ಮೇಡಂ, ಒಕ್ಕೂಟದ ಅಧ್ಯಕ್ಷರುಗಳು, ಗ್ರಾಮ ಸಮಿತಿ ಅಧ್ಯಕ್ಷರುಗಳು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ನಂತರ ನೂತನ ಜನಜಾಗೃತಿ ಸಮಿತಿಯನ್ನು ರಚಿಸಲಾಯಿತು. ಇದರಲ್ಲಿ ನಿತ್ಯಾನಂದ ನಾವರ, ಮೋಹನ್ ಅಂಡಿಂಜೆ, ಸದಾನಂದ ಗೌಡ, ಜಯರಾಜ್ ಹೆಗ್ಡೆ, ರಾಜು ಶೆಟ್ಟಿ, ವಸಂತ ಗುಣನಿಲ, ರತ್ನಾಕರ, ಆನಂದ ಶೆಟ್ಟಿ, ಆಯ್ಕೆ ಮಾಡಲಾಯಿತು. ನೂತನ ಜನಜಾಗೃತಿ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಇವರನ್ನು ಆಯ್ಕೆ ಮಾಡಲಾಯಿತು. ನಿತ್ಯಾನಂದ ನಾವರ ಮತ್ತು ಮೋಹನ್ ಅಂಡಿಂಜೆ ಇವರು ಜನಜಾಗೃತಿ ಬಗ್ಗೆ ಮಾತನಾಡಿದರು.

ಕೊಕ್ರಾಡಿ ಸಾವ್ಯದ ಸೇವಾ ಪ್ರತಿನಿಧಿ ಶಶಿಧರ್ ಕುಲಾಲ್ ಸ್ವಾಗತಿಸಿದರು. ಪ್ರಾಸ್ತಾವಿಕವಾಗಿ ಯಶವಂತ್ ಇವರು ಮಾತನಾಡಿದರು. ದಮಯಂತಿ ವಂದಿಸಿದರು.

Related posts

ಕೊಕ್ರಾಡಿ: ಮನ್ಯೋಡಿಗುತ್ತು ನಿವಾಸಿ ರವಿ ಪೂಜಾರಿ ನಿಧನ

Suddi Udaya

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya

2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

Suddi Udaya

ಉಪನಯನದಲ್ಲಿ ಗಾನವೈಭವ

Suddi Udaya
error: Content is protected !!