24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

ಬೆಳ್ತಂಗಡಿ : ನೆತ್ತಿ ಸುಡುವ ಬಿಸಿಲಿನ ಬೇಗೆಗೆ ಬಾಯಾರಿ ಬರುವ ಸಾರ್ವಜನಿಕರಿಗೆ ರೆಡ್ ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳ ತಂಡ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಎ.7 ರಂದು ಉಚಿತ ಮಜ್ಜಿಗೆ ವಿತರಿಸುವ ಮೂಲಕ ನಾಗರಿಕರ ಶ್ಲಾಘನೆಗೆ ಪಾತ್ರವಾಗಿದೆ.

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಶುಚಿ ರುಚಿಯಾದ ಮಜ್ಜಿಗೆ ನೀಡಿ ನಾಗರಿಕರ ಗಮನ ಸೆಳೆದಿದೆ.ನೆತ್ತಿ ಸುಡುವ ಉರಿ ಬಿಸಿಲಿಗೆ ಬಿಸಿಗಾಳಿ ಜೊತೆಗೆ ಭೂಮಿಯೇ ಧಗಧಗಿಸುವ ರೀತಿಯಲ್ಲಿ ಬರಿಗಾಲಲ್ಲಿ ನಡೆದಾಡಲಾಗದ ಪರಿಸ್ಥಿತಿ ಇರುವಾಗ ರೆಡ್ ಕ್ರಾಸ್ ಸಂಸ್ಥೆಯ ತಂಡ ಪೇಟೆಗೆ ಬಂದವರ ಬಾಯಾರಿಕೆ ತಣಿಸುವ ಕಾಳಜಿಯೊಂದಿಗೆ ಲೋಟದಲ್ಲಿ ತಂಪು ಮಜ್ಜಿಗೆ ಹಂಚುವ ಸಾಂಕೇತಿಕವಾದ ವಿಶಿಷ್ಟ ಕಾರ್ಯಕ್ರಮ ಆಯೋಜಿಸಿರುವುದಕ್ಕೆ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭ ರೆಡ್‌ ಕ್ರಾಸ್ ಸಂಸ್ಥೆ ಅಧ್ಯಕ್ಷ ಹರಿಪ್ರಸಾದ್, ಕಾರ್ಯದರ್ಶಿ ಯಶವಂತ ಪಟವರ್ಧನ್, ಸದಸ್ಯರಾದ ಸುಕನ್ಯಾ, ಪರಿಮಳಾ, ಸುಜಿತ್ ಪುಟಾಣಿ ಆರುಷಿ ಇದ್ದರು.

Related posts

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

Suddi Udaya

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

Suddi Udaya

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya
error: Content is protected !!