September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

ಬೆಳ್ತಂಗಡಿ : ನೆತ್ತಿ ಸುಡುವ ಬಿಸಿಲಿನ ಬೇಗೆಗೆ ಬಾಯಾರಿ ಬರುವ ಸಾರ್ವಜನಿಕರಿಗೆ ರೆಡ್ ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳ ತಂಡ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಎ.7 ರಂದು ಉಚಿತ ಮಜ್ಜಿಗೆ ವಿತರಿಸುವ ಮೂಲಕ ನಾಗರಿಕರ ಶ್ಲಾಘನೆಗೆ ಪಾತ್ರವಾಗಿದೆ.

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಶುಚಿ ರುಚಿಯಾದ ಮಜ್ಜಿಗೆ ನೀಡಿ ನಾಗರಿಕರ ಗಮನ ಸೆಳೆದಿದೆ.ನೆತ್ತಿ ಸುಡುವ ಉರಿ ಬಿಸಿಲಿಗೆ ಬಿಸಿಗಾಳಿ ಜೊತೆಗೆ ಭೂಮಿಯೇ ಧಗಧಗಿಸುವ ರೀತಿಯಲ್ಲಿ ಬರಿಗಾಲಲ್ಲಿ ನಡೆದಾಡಲಾಗದ ಪರಿಸ್ಥಿತಿ ಇರುವಾಗ ರೆಡ್ ಕ್ರಾಸ್ ಸಂಸ್ಥೆಯ ತಂಡ ಪೇಟೆಗೆ ಬಂದವರ ಬಾಯಾರಿಕೆ ತಣಿಸುವ ಕಾಳಜಿಯೊಂದಿಗೆ ಲೋಟದಲ್ಲಿ ತಂಪು ಮಜ್ಜಿಗೆ ಹಂಚುವ ಸಾಂಕೇತಿಕವಾದ ವಿಶಿಷ್ಟ ಕಾರ್ಯಕ್ರಮ ಆಯೋಜಿಸಿರುವುದಕ್ಕೆ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭ ರೆಡ್‌ ಕ್ರಾಸ್ ಸಂಸ್ಥೆ ಅಧ್ಯಕ್ಷ ಹರಿಪ್ರಸಾದ್, ಕಾರ್ಯದರ್ಶಿ ಯಶವಂತ ಪಟವರ್ಧನ್, ಸದಸ್ಯರಾದ ಸುಕನ್ಯಾ, ಪರಿಮಳಾ, ಸುಜಿತ್ ಪುಟಾಣಿ ಆರುಷಿ ಇದ್ದರು.

Related posts

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

Suddi Udaya

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಶಿಶಿಲ: ದಿ. ಧರ್ಣಪ್ಪ ಗೌಡ ರವರ ಸ್ಮರಣಾರ್ಥ ಕೊರಗಪ್ಪ ಗೌಡರಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘಕ್ಕೆ ನ್ಯಾಯಮೂರ್ತಿ ರಾಜೇಶ್‌ ರೈ ಕೈರಂಗಳ ಭೇಟಿ

Suddi Udaya
error: Content is protected !!