22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

ಬೆಳ್ತಂಗಡಿ : ನೆತ್ತಿ ಸುಡುವ ಬಿಸಿಲಿನ ಬೇಗೆಗೆ ಬಾಯಾರಿ ಬರುವ ಸಾರ್ವಜನಿಕರಿಗೆ ರೆಡ್ ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳ ತಂಡ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಎ.7 ರಂದು ಉಚಿತ ಮಜ್ಜಿಗೆ ವಿತರಿಸುವ ಮೂಲಕ ನಾಗರಿಕರ ಶ್ಲಾಘನೆಗೆ ಪಾತ್ರವಾಗಿದೆ.

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಶುಚಿ ರುಚಿಯಾದ ಮಜ್ಜಿಗೆ ನೀಡಿ ನಾಗರಿಕರ ಗಮನ ಸೆಳೆದಿದೆ.ನೆತ್ತಿ ಸುಡುವ ಉರಿ ಬಿಸಿಲಿಗೆ ಬಿಸಿಗಾಳಿ ಜೊತೆಗೆ ಭೂಮಿಯೇ ಧಗಧಗಿಸುವ ರೀತಿಯಲ್ಲಿ ಬರಿಗಾಲಲ್ಲಿ ನಡೆದಾಡಲಾಗದ ಪರಿಸ್ಥಿತಿ ಇರುವಾಗ ರೆಡ್ ಕ್ರಾಸ್ ಸಂಸ್ಥೆಯ ತಂಡ ಪೇಟೆಗೆ ಬಂದವರ ಬಾಯಾರಿಕೆ ತಣಿಸುವ ಕಾಳಜಿಯೊಂದಿಗೆ ಲೋಟದಲ್ಲಿ ತಂಪು ಮಜ್ಜಿಗೆ ಹಂಚುವ ಸಾಂಕೇತಿಕವಾದ ವಿಶಿಷ್ಟ ಕಾರ್ಯಕ್ರಮ ಆಯೋಜಿಸಿರುವುದಕ್ಕೆ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭ ರೆಡ್‌ ಕ್ರಾಸ್ ಸಂಸ್ಥೆ ಅಧ್ಯಕ್ಷ ಹರಿಪ್ರಸಾದ್, ಕಾರ್ಯದರ್ಶಿ ಯಶವಂತ ಪಟವರ್ಧನ್, ಸದಸ್ಯರಾದ ಸುಕನ್ಯಾ, ಪರಿಮಳಾ, ಸುಜಿತ್ ಪುಟಾಣಿ ಆರುಷಿ ಇದ್ದರು.

Related posts

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಬಿಜೆಪಿ ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್, ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ

Suddi Udaya

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!