25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

ಬೆಳ್ತಂಗಡಿ : ನೆತ್ತಿ ಸುಡುವ ಬಿಸಿಲಿನ ಬೇಗೆಗೆ ಬಾಯಾರಿ ಬರುವ ಸಾರ್ವಜನಿಕರಿಗೆ ರೆಡ್ ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳ ತಂಡ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಎ.7 ರಂದು ಉಚಿತ ಮಜ್ಜಿಗೆ ವಿತರಿಸುವ ಮೂಲಕ ನಾಗರಿಕರ ಶ್ಲಾಘನೆಗೆ ಪಾತ್ರವಾಗಿದೆ.

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಶುಚಿ ರುಚಿಯಾದ ಮಜ್ಜಿಗೆ ನೀಡಿ ನಾಗರಿಕರ ಗಮನ ಸೆಳೆದಿದೆ.ನೆತ್ತಿ ಸುಡುವ ಉರಿ ಬಿಸಿಲಿಗೆ ಬಿಸಿಗಾಳಿ ಜೊತೆಗೆ ಭೂಮಿಯೇ ಧಗಧಗಿಸುವ ರೀತಿಯಲ್ಲಿ ಬರಿಗಾಲಲ್ಲಿ ನಡೆದಾಡಲಾಗದ ಪರಿಸ್ಥಿತಿ ಇರುವಾಗ ರೆಡ್ ಕ್ರಾಸ್ ಸಂಸ್ಥೆಯ ತಂಡ ಪೇಟೆಗೆ ಬಂದವರ ಬಾಯಾರಿಕೆ ತಣಿಸುವ ಕಾಳಜಿಯೊಂದಿಗೆ ಲೋಟದಲ್ಲಿ ತಂಪು ಮಜ್ಜಿಗೆ ಹಂಚುವ ಸಾಂಕೇತಿಕವಾದ ವಿಶಿಷ್ಟ ಕಾರ್ಯಕ್ರಮ ಆಯೋಜಿಸಿರುವುದಕ್ಕೆ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭ ರೆಡ್‌ ಕ್ರಾಸ್ ಸಂಸ್ಥೆ ಅಧ್ಯಕ್ಷ ಹರಿಪ್ರಸಾದ್, ಕಾರ್ಯದರ್ಶಿ ಯಶವಂತ ಪಟವರ್ಧನ್, ಸದಸ್ಯರಾದ ಸುಕನ್ಯಾ, ಪರಿಮಳಾ, ಸುಜಿತ್ ಪುಟಾಣಿ ಆರುಷಿ ಇದ್ದರು.

Related posts

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ : ಉಜಿರೆ ಎಸ್.ಡಿ.ಎಂ ಕಾಲೇಜಿಗೆ 6 ಚಿನ್ನದ ಪದಕ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!