23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

ಶಿಶಿಲ : ಅದೊಂದು ಅಪರೂಪದ ‌ಕಾರ್ಯಕ್ರಮ. ಪ್ರತೀವರ್ಷ ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನೂಮ ಜಯಂತಿಯಂದು ಭಜನೆ, ಅನ್ನದಾನ, ರಾಮಾಯಣ ಗ್ರಂಥಪೂಜೆ, ರಾಮಾಯಣ ಕಥೆ ನಿರಂತರ ನಡೆದುಕೊಂಡು ಬರುತ್ತಿದೆ.

ಹನುಮ ಜಯಂತಿ ಈ ರೀತಿಯ‌ ಕಾರ್ಯಕ್ರಮ ನಾನು ಪ್ರಥಮ ಬಾರಿ ನೋಡುತ್ತಿದ್ದೆನೆ. ಧಾರ್ಮಿಕ ಕಾರ್ಯ, ಧರ್ಮ ಜಾಗ್ರತಿ ಮೂಡಿಸುತ್ತಿರುವ ಈ ಮನೆಯ ಸೇವಾ ಕಾರ್ಯಕ್ಕೆ‌ ಅಭಿನಂದನೆ. ಎಂದು ಬೆಂಗಳೂರು, ದಾವಣಗೆರೆ ವಿಪ್ರ ಸಾಮ್ರಾಜ್ಯದ ನಿರ್ದೆಶಕರಾದ ವೆ.ಮೂ ಶ್ರೀ ರಾಘವೇಂದ್ರ ಆಚಾರ್ಯ ನುಡಿದರು.

ಅವರು ಶಿಶಿಲ ಶಿವಕೀರ್ತಿ ನಿಲಯದಲ್ಲಿ ನಡೆದ‌ ಹನೂಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನುಡಿದಿದ್ದರು,
ಇವರ ಧಾರ್ಮಿಕ ಸೇವಾ ಕಾರ್ಯ ಗುರುತಿಸಿದ ವಿಪ್ರ ಸಮೂಹ ಸಂಸ್ಥೆ ಬೆಂಗಳೂರಿನ ನಿರ್ದೆಶಕರಾದ ಶ್ರೀ ವೆ.ಬ್ರಹ್ಮ ರಾಘವೇಂದ್ರ ಆಚಾರ್ಯ ಮತ್ತು ಶ್ರೀ ರಾಘವೇಂದ್ರ ಮಾದಾಪುರ ಇವರು ಹನೂಮ ‌ಜಯಂತಿ ಶುಭ ಸಂಧರ್ಭದಲ್ಲಿ ಶ್ರೀ ಬಿ.ಜಯರಾಮ ನೆಲ್ಲಿತ್ತಾಯರಿಗೆ ತಮ್ಮ ಸಂಸ್ಥೆ ವತಿಯಿಂದ ” ಭಜನಾ ಭಾಸ್ಕರ” ಎಂಬ ಪ್ರಶಸ್ತಿ ಪ್ರಸ್ತಾಪವನ್ನು ಮಂಡಿಸಿದರು.

ಮುಂದಿನ ದಿನದಲ್ಲಿ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ.
ಕಾರ್ಯಕ್ರಮದಲ್ಲಿ ಶ್ರೀ ರಾಮಕೃಷ್ಣ ‌ಕಾಟುಕುಕ್ಕೆ, ಶ್ರೀ ಸುಂದರ ಬಿಳಿನೆಲೆ, ಶ್ರೀ ರಾಘವೇಂದ್ರ ಕಿಗ್ಗ, ಶ್ರೀ ಶ್ರೀನಿವಾಸ‌ ಮೂಡೆತ್ತಾಯ ಮುಂತಾದ ಗಣ್ಯರು ಉಪಸ್ಥಿತರಿದ್ದರು. ‌
ಇದೆ ಸಂಧರ್ಭದಲ್ಲಿ ಶ್ರೀ ಜಯರಾಮ ನೆಲ್ಲಿತ್ತಾಯ ದಂಪತಿಗಳನ್ನು ವಿಪ್ರ ಸಮೂಹ ಸಂಸ್ಥೆ ಬೆಂಗಳೂರು ವತಿಯಿಂದ ಅಭಿನಂದಿಸಲಾಗಿತ್ತು.

Related posts

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ರೆಂಕೆದಗುತ್ತು: ವಿಪರೀತ ಮಳೆಯಿಂದ ಮನೆಗೆ ಹಾನಿ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

Suddi Udaya
error: Content is protected !!