September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

ಶಿಶಿಲ : ಅದೊಂದು ಅಪರೂಪದ ‌ಕಾರ್ಯಕ್ರಮ. ಪ್ರತೀವರ್ಷ ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನೂಮ ಜಯಂತಿಯಂದು ಭಜನೆ, ಅನ್ನದಾನ, ರಾಮಾಯಣ ಗ್ರಂಥಪೂಜೆ, ರಾಮಾಯಣ ಕಥೆ ನಿರಂತರ ನಡೆದುಕೊಂಡು ಬರುತ್ತಿದೆ.

ಹನುಮ ಜಯಂತಿ ಈ ರೀತಿಯ‌ ಕಾರ್ಯಕ್ರಮ ನಾನು ಪ್ರಥಮ ಬಾರಿ ನೋಡುತ್ತಿದ್ದೆನೆ. ಧಾರ್ಮಿಕ ಕಾರ್ಯ, ಧರ್ಮ ಜಾಗ್ರತಿ ಮೂಡಿಸುತ್ತಿರುವ ಈ ಮನೆಯ ಸೇವಾ ಕಾರ್ಯಕ್ಕೆ‌ ಅಭಿನಂದನೆ. ಎಂದು ಬೆಂಗಳೂರು, ದಾವಣಗೆರೆ ವಿಪ್ರ ಸಾಮ್ರಾಜ್ಯದ ನಿರ್ದೆಶಕರಾದ ವೆ.ಮೂ ಶ್ರೀ ರಾಘವೇಂದ್ರ ಆಚಾರ್ಯ ನುಡಿದರು.

ಅವರು ಶಿಶಿಲ ಶಿವಕೀರ್ತಿ ನಿಲಯದಲ್ಲಿ ನಡೆದ‌ ಹನೂಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನುಡಿದಿದ್ದರು,
ಇವರ ಧಾರ್ಮಿಕ ಸೇವಾ ಕಾರ್ಯ ಗುರುತಿಸಿದ ವಿಪ್ರ ಸಮೂಹ ಸಂಸ್ಥೆ ಬೆಂಗಳೂರಿನ ನಿರ್ದೆಶಕರಾದ ಶ್ರೀ ವೆ.ಬ್ರಹ್ಮ ರಾಘವೇಂದ್ರ ಆಚಾರ್ಯ ಮತ್ತು ಶ್ರೀ ರಾಘವೇಂದ್ರ ಮಾದಾಪುರ ಇವರು ಹನೂಮ ‌ಜಯಂತಿ ಶುಭ ಸಂಧರ್ಭದಲ್ಲಿ ಶ್ರೀ ಬಿ.ಜಯರಾಮ ನೆಲ್ಲಿತ್ತಾಯರಿಗೆ ತಮ್ಮ ಸಂಸ್ಥೆ ವತಿಯಿಂದ ” ಭಜನಾ ಭಾಸ್ಕರ” ಎಂಬ ಪ್ರಶಸ್ತಿ ಪ್ರಸ್ತಾಪವನ್ನು ಮಂಡಿಸಿದರು.

ಮುಂದಿನ ದಿನದಲ್ಲಿ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ.
ಕಾರ್ಯಕ್ರಮದಲ್ಲಿ ಶ್ರೀ ರಾಮಕೃಷ್ಣ ‌ಕಾಟುಕುಕ್ಕೆ, ಶ್ರೀ ಸುಂದರ ಬಿಳಿನೆಲೆ, ಶ್ರೀ ರಾಘವೇಂದ್ರ ಕಿಗ್ಗ, ಶ್ರೀ ಶ್ರೀನಿವಾಸ‌ ಮೂಡೆತ್ತಾಯ ಮುಂತಾದ ಗಣ್ಯರು ಉಪಸ್ಥಿತರಿದ್ದರು. ‌
ಇದೆ ಸಂಧರ್ಭದಲ್ಲಿ ಶ್ರೀ ಜಯರಾಮ ನೆಲ್ಲಿತ್ತಾಯ ದಂಪತಿಗಳನ್ನು ವಿಪ್ರ ಸಮೂಹ ಸಂಸ್ಥೆ ಬೆಂಗಳೂರು ವತಿಯಿಂದ ಅಭಿನಂದಿಸಲಾಗಿತ್ತು.

Related posts

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್ ನವೀಕೃತಗೊಂಡು ಶುಭಾರಂಭ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ವೈಜ್ಞಾನಿಕವಾಗಿ ನಿಮಿ೯ಸಬೇಕು ಮತ್ತು ಹೆದ್ದಾರಿ ಗುತ್ತಿಗೆಯಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆಗೆ ಒಳಪಡಿಸಬೇಕು ಒತ್ತಾಯಿಸಿ ಜನಾಗ್ರಹ ಸಭೆ

Suddi Udaya
error: Content is protected !!