24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎ.9: ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ

ಉಜಿರೆ: ಪ್ರತಿ ಕುಟುಂಬಗಳೂ ತಮ್ಮಲ್ಲಿ ಬೆಳೆದಂತಹ ದವಸ- ಧಾನ್ಯಗಳನ್ನು, ತರಕಾರಿ ಬೆಳೆಗಳನ್ನು ದೇವರಿಗೆ ಕಾಣಿಕೆ ಇಡುವಂತಹ ಸಂಪ್ರದಾಯ ಎಲ್ಲ ಕಡೆಗಳಲ್ಲೂ ನಾವು ಕಾಣುತ್ತೇವೆ. ಈ ರೀತಿಯ ಕಾಣಿಕೆ ಇಡುವುದನ್ನು ವಿಷು ಕಣಿ ಎಂದು ಕರೆಯುತ್ತಿದ್ದು ಹೆಚ್ಚಾಗಿ ಕೃಷಿ ಕುಟುಂಬಗಳಲ್ಲಿ ಈ ಆಚರಣೆ ತೊಡಗಿಕೊಂಡಿದೆ.

ತಾಲೂಕಿನ ವಿವಿಧ ಭಾಗಗಳಲ್ಲಿ ನೆಲೆಸಿರುವ ಹಿಂದೂ ಮಲಯಾಳಿ ಬಾಂಧವರು ಒಂದಡೆ ಸೇರಿ ಸಂತೋಷದಿಂದ ಸಂಭ್ರಮಿಸುವ ಒಂದು ದಿನ ಎ. 9ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿದೆ.

ಬೆಳ್ತಂಗಡಿ ತಾಲೂಕು ವಿಷು ಕಣಿ ಆಚಾರಣ ಸಮಿತಿಯಿಂದ ವಿಷು ಕಣಿ 2.0 ಕಾರ್ಯಕ್ರಮ ಆಯೋಜಿಸಿದ್ದು ಪ್ರತಿಷ್ಠಿತ ಕಲಾವಿದರಿಂದ ಹಾಗೂ ಸಿನೆಮಾ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿದೆ.

ಕಾರ್ಯಕ್ರಮದಲ್ಲಿ ಕೇರಳ ಸಂಪ್ರದಾಯದಂತೆ ವಿವಿಧ ತಿಂಡಿ ತಿನಸುಗಳು, ಪೂಕಲಂ, ವಿವಿಧ ಆಟೋಟ ಸ್ಪರ್ದೆಗಳು,ಕೇರಳ ಚೆಂಡೆ, ಗೊಂಬೆಗಳು ಎಲ್ಲರ ಗಮನ ಸೆಳೆಯಲಿದೆ ಎಂದು ಸಮಿತಿ ಪ್ರಮುಖರಾದ ಅನಿಲ್ ಕುಮಾರ್ ತಿಳಿಸಿದ್ದಾರೆ.

Related posts

ಓಡಿಲ್ನಾಳ ಸ. ಉ. ಪ್ರಾ. ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರ

Suddi Udaya

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

Suddi Udaya

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya
error: Content is protected !!