23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎ.9: ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ

ಉಜಿರೆ: ಪ್ರತಿ ಕುಟುಂಬಗಳೂ ತಮ್ಮಲ್ಲಿ ಬೆಳೆದಂತಹ ದವಸ- ಧಾನ್ಯಗಳನ್ನು, ತರಕಾರಿ ಬೆಳೆಗಳನ್ನು ದೇವರಿಗೆ ಕಾಣಿಕೆ ಇಡುವಂತಹ ಸಂಪ್ರದಾಯ ಎಲ್ಲ ಕಡೆಗಳಲ್ಲೂ ನಾವು ಕಾಣುತ್ತೇವೆ. ಈ ರೀತಿಯ ಕಾಣಿಕೆ ಇಡುವುದನ್ನು ವಿಷು ಕಣಿ ಎಂದು ಕರೆಯುತ್ತಿದ್ದು ಹೆಚ್ಚಾಗಿ ಕೃಷಿ ಕುಟುಂಬಗಳಲ್ಲಿ ಈ ಆಚರಣೆ ತೊಡಗಿಕೊಂಡಿದೆ.

ತಾಲೂಕಿನ ವಿವಿಧ ಭಾಗಗಳಲ್ಲಿ ನೆಲೆಸಿರುವ ಹಿಂದೂ ಮಲಯಾಳಿ ಬಾಂಧವರು ಒಂದಡೆ ಸೇರಿ ಸಂತೋಷದಿಂದ ಸಂಭ್ರಮಿಸುವ ಒಂದು ದಿನ ಎ. 9ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿದೆ.

ಬೆಳ್ತಂಗಡಿ ತಾಲೂಕು ವಿಷು ಕಣಿ ಆಚಾರಣ ಸಮಿತಿಯಿಂದ ವಿಷು ಕಣಿ 2.0 ಕಾರ್ಯಕ್ರಮ ಆಯೋಜಿಸಿದ್ದು ಪ್ರತಿಷ್ಠಿತ ಕಲಾವಿದರಿಂದ ಹಾಗೂ ಸಿನೆಮಾ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿದೆ.

ಕಾರ್ಯಕ್ರಮದಲ್ಲಿ ಕೇರಳ ಸಂಪ್ರದಾಯದಂತೆ ವಿವಿಧ ತಿಂಡಿ ತಿನಸುಗಳು, ಪೂಕಲಂ, ವಿವಿಧ ಆಟೋಟ ಸ್ಪರ್ದೆಗಳು,ಕೇರಳ ಚೆಂಡೆ, ಗೊಂಬೆಗಳು ಎಲ್ಲರ ಗಮನ ಸೆಳೆಯಲಿದೆ ಎಂದು ಸಮಿತಿ ಪ್ರಮುಖರಾದ ಅನಿಲ್ ಕುಮಾರ್ ತಿಳಿಸಿದ್ದಾರೆ.

Related posts

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ 35 ವಿದ್ಯಾರ್ಥಿಗಳು ತೇರ್ಗಡೆ

Suddi Udaya

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya

ವೇಣೂರು ಭಾರತಿ ಶಿಶುಮಂದಿರದಲ್ಲಿ ಭಗವದ್ಗೀತೆಯ ಕಲಿಕಾ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

Suddi Udaya
error: Content is protected !!