25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎ.9: ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ

ಉಜಿರೆ: ಪ್ರತಿ ಕುಟುಂಬಗಳೂ ತಮ್ಮಲ್ಲಿ ಬೆಳೆದಂತಹ ದವಸ- ಧಾನ್ಯಗಳನ್ನು, ತರಕಾರಿ ಬೆಳೆಗಳನ್ನು ದೇವರಿಗೆ ಕಾಣಿಕೆ ಇಡುವಂತಹ ಸಂಪ್ರದಾಯ ಎಲ್ಲ ಕಡೆಗಳಲ್ಲೂ ನಾವು ಕಾಣುತ್ತೇವೆ. ಈ ರೀತಿಯ ಕಾಣಿಕೆ ಇಡುವುದನ್ನು ವಿಷು ಕಣಿ ಎಂದು ಕರೆಯುತ್ತಿದ್ದು ಹೆಚ್ಚಾಗಿ ಕೃಷಿ ಕುಟುಂಬಗಳಲ್ಲಿ ಈ ಆಚರಣೆ ತೊಡಗಿಕೊಂಡಿದೆ.

ತಾಲೂಕಿನ ವಿವಿಧ ಭಾಗಗಳಲ್ಲಿ ನೆಲೆಸಿರುವ ಹಿಂದೂ ಮಲಯಾಳಿ ಬಾಂಧವರು ಒಂದಡೆ ಸೇರಿ ಸಂತೋಷದಿಂದ ಸಂಭ್ರಮಿಸುವ ಒಂದು ದಿನ ಎ. 9ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿದೆ.

ಬೆಳ್ತಂಗಡಿ ತಾಲೂಕು ವಿಷು ಕಣಿ ಆಚಾರಣ ಸಮಿತಿಯಿಂದ ವಿಷು ಕಣಿ 2.0 ಕಾರ್ಯಕ್ರಮ ಆಯೋಜಿಸಿದ್ದು ಪ್ರತಿಷ್ಠಿತ ಕಲಾವಿದರಿಂದ ಹಾಗೂ ಸಿನೆಮಾ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿದೆ.

ಕಾರ್ಯಕ್ರಮದಲ್ಲಿ ಕೇರಳ ಸಂಪ್ರದಾಯದಂತೆ ವಿವಿಧ ತಿಂಡಿ ತಿನಸುಗಳು, ಪೂಕಲಂ, ವಿವಿಧ ಆಟೋಟ ಸ್ಪರ್ದೆಗಳು,ಕೇರಳ ಚೆಂಡೆ, ಗೊಂಬೆಗಳು ಎಲ್ಲರ ಗಮನ ಸೆಳೆಯಲಿದೆ ಎಂದು ಸಮಿತಿ ಪ್ರಮುಖರಾದ ಅನಿಲ್ ಕುಮಾರ್ ತಿಳಿಸಿದ್ದಾರೆ.

Related posts

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಜೆ ಇ ಇ ಮೈನ್ಸ್ ಪರೀಕ್ಷೆ: ವಾಣಿ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಗೆ ಶೇ. 98.08 ಫಲಿತಾಂಶ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!