22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

ಬೆಳ್ತಂಗಡಿ : ನೆತ್ತಿ ಸುಡುವ ಬಿಸಿಲಿನ ಬೇಗೆಗೆ ಬಾಯಾರಿ ಬರುವ ಸಾರ್ವಜನಿಕರಿಗೆ ರೆಡ್ ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳ ತಂಡ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಎ.7 ರಂದು ಉಚಿತ ಮಜ್ಜಿಗೆ ವಿತರಿಸುವ ಮೂಲಕ ನಾಗರಿಕರ ಶ್ಲಾಘನೆಗೆ ಪಾತ್ರವಾಗಿದೆ.

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಶುಚಿ ರುಚಿಯಾದ ಮಜ್ಜಿಗೆ ನೀಡಿ ನಾಗರಿಕರ ಗಮನ ಸೆಳೆದಿದೆ.ನೆತ್ತಿ ಸುಡುವ ಉರಿ ಬಿಸಿಲಿಗೆ ಬಿಸಿಗಾಳಿ ಜೊತೆಗೆ ಭೂಮಿಯೇ ಧಗಧಗಿಸುವ ರೀತಿಯಲ್ಲಿ ಬರಿಗಾಲಲ್ಲಿ ನಡೆದಾಡಲಾಗದ ಪರಿಸ್ಥಿತಿ ಇರುವಾಗ ರೆಡ್ ಕ್ರಾಸ್ ಸಂಸ್ಥೆಯ ತಂಡ ಪೇಟೆಗೆ ಬಂದವರ ಬಾಯಾರಿಕೆ ತಣಿಸುವ ಕಾಳಜಿಯೊಂದಿಗೆ ಲೋಟದಲ್ಲಿ ತಂಪು ಮಜ್ಜಿಗೆ ಹಂಚುವ ಸಾಂಕೇತಿಕವಾದ ವಿಶಿಷ್ಟ ಕಾರ್ಯಕ್ರಮ ಆಯೋಜಿಸಿರುವುದಕ್ಕೆ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭ ರೆಡ್‌ ಕ್ರಾಸ್ ಸಂಸ್ಥೆ ಅಧ್ಯಕ್ಷ ಹರಿಪ್ರಸಾದ್, ಕಾರ್ಯದರ್ಶಿ ಯಶವಂತ ಪಟವರ್ಧನ್, ಸದಸ್ಯರಾದ ಸುಕನ್ಯಾ, ಪರಿಮಳಾ, ಸುಜಿತ್ ಪುಟಾಣಿ ಆರುಷಿ ಇದ್ದರು.

Related posts

ನಾವೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಹಿರಿಯ ನಾಗರೀಕರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ, ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಪೀಢರ್ ಅಳವಡಿಸಿ, ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಗ್ರಾಹಕರ ಆಗ್ರಹ

Suddi Udaya

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

Suddi Udaya

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

Suddi Udaya

ಬೆಳ್ತಂಗಡಿ: ರಾಮನಗರ ನಿವಾಸಿ ಉಪಾಲಕ್ಷಿ ನಿಧನ

Suddi Udaya

ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Suddi Udaya
error: Content is protected !!