25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

ಶಿಶಿಲ : ಅದೊಂದು ಅಪರೂಪದ ‌ಕಾರ್ಯಕ್ರಮ. ಪ್ರತೀವರ್ಷ ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನೂಮ ಜಯಂತಿಯಂದು ಭಜನೆ, ಅನ್ನದಾನ, ರಾಮಾಯಣ ಗ್ರಂಥಪೂಜೆ, ರಾಮಾಯಣ ಕಥೆ ನಿರಂತರ ನಡೆದುಕೊಂಡು ಬರುತ್ತಿದೆ.

ಹನುಮ ಜಯಂತಿ ಈ ರೀತಿಯ‌ ಕಾರ್ಯಕ್ರಮ ನಾನು ಪ್ರಥಮ ಬಾರಿ ನೋಡುತ್ತಿದ್ದೆನೆ. ಧಾರ್ಮಿಕ ಕಾರ್ಯ, ಧರ್ಮ ಜಾಗ್ರತಿ ಮೂಡಿಸುತ್ತಿರುವ ಈ ಮನೆಯ ಸೇವಾ ಕಾರ್ಯಕ್ಕೆ‌ ಅಭಿನಂದನೆ. ಎಂದು ಬೆಂಗಳೂರು, ದಾವಣಗೆರೆ ವಿಪ್ರ ಸಾಮ್ರಾಜ್ಯದ ನಿರ್ದೆಶಕರಾದ ವೆ.ಮೂ ಶ್ರೀ ರಾಘವೇಂದ್ರ ಆಚಾರ್ಯ ನುಡಿದರು.

ಅವರು ಶಿಶಿಲ ಶಿವಕೀರ್ತಿ ನಿಲಯದಲ್ಲಿ ನಡೆದ‌ ಹನೂಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನುಡಿದಿದ್ದರು,
ಇವರ ಧಾರ್ಮಿಕ ಸೇವಾ ಕಾರ್ಯ ಗುರುತಿಸಿದ ವಿಪ್ರ ಸಮೂಹ ಸಂಸ್ಥೆ ಬೆಂಗಳೂರಿನ ನಿರ್ದೆಶಕರಾದ ಶ್ರೀ ವೆ.ಬ್ರಹ್ಮ ರಾಘವೇಂದ್ರ ಆಚಾರ್ಯ ಮತ್ತು ಶ್ರೀ ರಾಘವೇಂದ್ರ ಮಾದಾಪುರ ಇವರು ಹನೂಮ ‌ಜಯಂತಿ ಶುಭ ಸಂಧರ್ಭದಲ್ಲಿ ಶ್ರೀ ಬಿ.ಜಯರಾಮ ನೆಲ್ಲಿತ್ತಾಯರಿಗೆ ತಮ್ಮ ಸಂಸ್ಥೆ ವತಿಯಿಂದ ” ಭಜನಾ ಭಾಸ್ಕರ” ಎಂಬ ಪ್ರಶಸ್ತಿ ಪ್ರಸ್ತಾಪವನ್ನು ಮಂಡಿಸಿದರು.

ಮುಂದಿನ ದಿನದಲ್ಲಿ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ.
ಕಾರ್ಯಕ್ರಮದಲ್ಲಿ ಶ್ರೀ ರಾಮಕೃಷ್ಣ ‌ಕಾಟುಕುಕ್ಕೆ, ಶ್ರೀ ಸುಂದರ ಬಿಳಿನೆಲೆ, ಶ್ರೀ ರಾಘವೇಂದ್ರ ಕಿಗ್ಗ, ಶ್ರೀ ಶ್ರೀನಿವಾಸ‌ ಮೂಡೆತ್ತಾಯ ಮುಂತಾದ ಗಣ್ಯರು ಉಪಸ್ಥಿತರಿದ್ದರು. ‌
ಇದೆ ಸಂಧರ್ಭದಲ್ಲಿ ಶ್ರೀ ಜಯರಾಮ ನೆಲ್ಲಿತ್ತಾಯ ದಂಪತಿಗಳನ್ನು ವಿಪ್ರ ಸಮೂಹ ಸಂಸ್ಥೆ ಬೆಂಗಳೂರು ವತಿಯಿಂದ ಅಭಿನಂದಿಸಲಾಗಿತ್ತು.

Related posts

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya

ಉಜಿರೆಯ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರ

Suddi Udaya
error: Content is protected !!