July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

ನಾಲ್ಕೂರು: ತುಳುನಾಡು ಜನಪದ ಕಲೆಗಳ ಆಗರ, ಅಂತಹ ಶ್ರೀಮಂತ ಜನಪದ ಕಲೆಗಳಲ್ಲಿ ಒಂದಾದ ಸುಗ್ಗಿಯ ಹುಣ್ಣಿಮೆಯ ಮೂರು ದಿನಗಳಲ್ಲಿ ಜೋಗಿ ಪುರುಷರ ಕಟ್ಟುವಿಕೆಯ ಆಚರಣೆ ಕೂಡ ಒಂದು.‌ ಈ ಆಚರಣೆಯನ್ನ ಅನಾಧಿಕಾಲದಿಂದಲೂ ಅತ್ಯಂತ ಶ್ರದ್ಧೆ ಭಕ್ತಿಯಿಂದ ನಾಲ್ಕೂರು ಗ್ರಾಮದ ನಿಟ್ಟಡ್ಕದ ಪಲ್ಕೆಯಲ್ಲಿ ನಡೆಸಿಕ್ಕೊಂಡು ಬರುತಿದ್ದು ಹಿರಿಯರ ಮಾರ್ಗದರ್ಶನದೊಂದಿಗೆ ಊರ ಪರವೂರ ಬಂಧುಗಳು ಈ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾರೆ.

ಈ ಆಚರಣೆಯ ಪುರುಷರ ರಾಶಿಪೂಜೆ ನಿಟ್ಟಡ್ಕ ಪಲ್ಕೆಯಲ್ಲಿ ಎ.8 ರಂದು ನೆರವೇರಿತು‌.
ಮೂರು ದಿನಗಳಿಂದ ಮನೆ ಮನೆಗೆ ವಿವಿಧ ವೇಷ ಭೂಷಣಗಳೊಂದಿಗೆ ತೆರಳಿ ಬರುವ ಜೋಗಿ ಪುರುಷರು ನಂತರ ಕದ್ರಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ರಾಶಿ ಪೂಜೆಯಲ್ಲಿ ಭಾಗವಹಿಸುತ್ತಾರೆ.

ಊರ ಸಮಸ್ತರ ಸಹಕಾರದೊಂದಿಗೆ ಅತ್ಯಂತ ಭಕ್ತಿ ಭಾವದೊಂದಿಗೆ ರಾಶಿ ಪೂಜೆ ನಡೆಯಿತು.

Related posts

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸ್ಪೂರ್ತಿ 2K25 ಕಾಮರ್ಸ್ ಫೆಸ್ಟ್

Suddi Udaya
error: Content is protected !!