23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

ನಾಲ್ಕೂರು: ತುಳುನಾಡು ಜನಪದ ಕಲೆಗಳ ಆಗರ, ಅಂತಹ ಶ್ರೀಮಂತ ಜನಪದ ಕಲೆಗಳಲ್ಲಿ ಒಂದಾದ ಸುಗ್ಗಿಯ ಹುಣ್ಣಿಮೆಯ ಮೂರು ದಿನಗಳಲ್ಲಿ ಜೋಗಿ ಪುರುಷರ ಕಟ್ಟುವಿಕೆಯ ಆಚರಣೆ ಕೂಡ ಒಂದು.‌ ಈ ಆಚರಣೆಯನ್ನ ಅನಾಧಿಕಾಲದಿಂದಲೂ ಅತ್ಯಂತ ಶ್ರದ್ಧೆ ಭಕ್ತಿಯಿಂದ ನಾಲ್ಕೂರು ಗ್ರಾಮದ ನಿಟ್ಟಡ್ಕದ ಪಲ್ಕೆಯಲ್ಲಿ ನಡೆಸಿಕ್ಕೊಂಡು ಬರುತಿದ್ದು ಹಿರಿಯರ ಮಾರ್ಗದರ್ಶನದೊಂದಿಗೆ ಊರ ಪರವೂರ ಬಂಧುಗಳು ಈ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾರೆ.

ಈ ಆಚರಣೆಯ ಪುರುಷರ ರಾಶಿಪೂಜೆ ನಿಟ್ಟಡ್ಕ ಪಲ್ಕೆಯಲ್ಲಿ ಎ.8 ರಂದು ನೆರವೇರಿತು‌.
ಮೂರು ದಿನಗಳಿಂದ ಮನೆ ಮನೆಗೆ ವಿವಿಧ ವೇಷ ಭೂಷಣಗಳೊಂದಿಗೆ ತೆರಳಿ ಬರುವ ಜೋಗಿ ಪುರುಷರು ನಂತರ ಕದ್ರಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ರಾಶಿ ಪೂಜೆಯಲ್ಲಿ ಭಾಗವಹಿಸುತ್ತಾರೆ.

ಊರ ಸಮಸ್ತರ ಸಹಕಾರದೊಂದಿಗೆ ಅತ್ಯಂತ ಭಕ್ತಿ ಭಾವದೊಂದಿಗೆ ರಾಶಿ ಪೂಜೆ ನಡೆಯಿತು.

Related posts

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!