23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

ನಾಲ್ಕೂರು: ತುಳುನಾಡು ಜನಪದ ಕಲೆಗಳ ಆಗರ, ಅಂತಹ ಶ್ರೀಮಂತ ಜನಪದ ಕಲೆಗಳಲ್ಲಿ ಒಂದಾದ ಸುಗ್ಗಿಯ ಹುಣ್ಣಿಮೆಯ ಮೂರು ದಿನಗಳಲ್ಲಿ ಜೋಗಿ ಪುರುಷರ ಕಟ್ಟುವಿಕೆಯ ಆಚರಣೆ ಕೂಡ ಒಂದು.‌ ಈ ಆಚರಣೆಯನ್ನ ಅನಾಧಿಕಾಲದಿಂದಲೂ ಅತ್ಯಂತ ಶ್ರದ್ಧೆ ಭಕ್ತಿಯಿಂದ ನಾಲ್ಕೂರು ಗ್ರಾಮದ ನಿಟ್ಟಡ್ಕದ ಪಲ್ಕೆಯಲ್ಲಿ ನಡೆಸಿಕ್ಕೊಂಡು ಬರುತಿದ್ದು ಹಿರಿಯರ ಮಾರ್ಗದರ್ಶನದೊಂದಿಗೆ ಊರ ಪರವೂರ ಬಂಧುಗಳು ಈ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾರೆ.

ಈ ಆಚರಣೆಯ ಪುರುಷರ ರಾಶಿಪೂಜೆ ನಿಟ್ಟಡ್ಕ ಪಲ್ಕೆಯಲ್ಲಿ ಎ.8 ರಂದು ನೆರವೇರಿತು‌.
ಮೂರು ದಿನಗಳಿಂದ ಮನೆ ಮನೆಗೆ ವಿವಿಧ ವೇಷ ಭೂಷಣಗಳೊಂದಿಗೆ ತೆರಳಿ ಬರುವ ಜೋಗಿ ಪುರುಷರು ನಂತರ ಕದ್ರಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ರಾಶಿ ಪೂಜೆಯಲ್ಲಿ ಭಾಗವಹಿಸುತ್ತಾರೆ.

ಊರ ಸಮಸ್ತರ ಸಹಕಾರದೊಂದಿಗೆ ಅತ್ಯಂತ ಭಕ್ತಿ ಭಾವದೊಂದಿಗೆ ರಾಶಿ ಪೂಜೆ ನಡೆಯಿತು.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

Suddi Udaya

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya
error: Content is protected !!