ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಮೇಲಂತಬೆಟ್ಟು : ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ಕ್ಷೇತ್ರದಲ್ಲಿ12 ವರ್ಷಗಳ ಬಳಿಕ ಎ.3 ರಿಂದ ಆರಂಭಗೊಂಡ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಎ.7ರಂದು ರಾತ್ರಿ ಅಗ್ನಿಗುಳಿಗನ ಗಗ್ಗರ ಸೇವೆಯೊಂದಿಗೆ ಸಂಪನ್ನಗೊಂಡಿತ್ತು.


ಬೆಳಿಗ್ಗೆ ಗಣಹೋಮ, ಶ್ರೀದೇವಿ ಭಗವತಿ ಅಮ್ಮನವರಿಗೆ ಪರಿಕಲಶ ಸಹಿತ ಬ್ರಹ್ಮಕುಂಬಾಭಿಷೇಕ, ಶ್ರೀ ಮಹಾಗಣಪತಿ ದೇವರಿಗೆ ಅಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಸಂಜೆ ಶ್ರೀ ಚಕ್ರಪೂಜೆ, ರಂಗಪೂಜೆ, ಮಹಾಪೂಜೆ ನಡೆಯಿತು.
ರಾತ್ರಿ ಅಗ್ನಿಗುಳಿಗನ ಗಗ್ಗರ ಸೇವೆ ವೈಭವ ಪೂರ್ಣವಾಗಿ ಜರುಗಿತು.

ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಶಾಸಕರಾದ ಹರೀಶ್ ಪೂಂಜ ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು, ಊರ ಹಾಗೂ ಪರವೂರಿನ ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಧನ್ಯತೆಯನ್ನು ಪಡೆದರು.

Leave a Comment

error: Content is protected !!