38.6 C
ಪುತ್ತೂರು, ಬೆಳ್ತಂಗಡಿ
March 6, 2026
ಚಿತ್ರ ವರದಿಜಿಲ್ಲಾ ಸುದ್ದಿ

ನಮ್ಮ ಟಿವಿಯ ‘ಬಲೆ ಚಾತುರ್ಪು ತೋಜಾಲೆ’ ರೀಯಾಲಿಟಿ ಶೋ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ ಸ್ಥಾನ

ಬೆಳ್ತಂಗಡಿ : ಹಲವಾರು ಜನಪ್ರೀಯ ಕಾರ್ಯಕ್ರಮಗಳ ಮೂಲಕ‌ ಜನಮನ ಗೆದ್ದ ಕರಾವಳಿಯ ಹೆಸರಾಂತ ಚಾನೆಲ್ ನಮ್ಮ‌ ಟಿವಿ ಪ್ರಸ್ತುತ ಪಡೆಸಿದ ಬಲೆ ಚಾತುರ್ಪು ತೋಜಾಲೆ ರೀಯಾಲಿಟಿ ಶೋ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕವು ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡು ನಗದು ರೂ 2 ಲಕ್ಷ ಮತ್ತು ಪ್ರಶಸ್ತಿಯನ್ನು ಪಡೆದುಕೊಂಡಿದೆ.


20 ನಿಮಿಷದಲ್ಲಿ ಸಾಂಸ್ಕ್ರತಿಕ ವೈವಿಧ್ಯಮಯ ಕಾರ್ಯಕ್ರಮವನ್ನು ನೀಡ ಬೇಕಿದ್ದ ಈ ಸ್ಪರ್ಧೆಯಲ್ಲಿ ಉಡುಪಿ, ದಕ್ಷಿಣ ಕನ್ನಡದ 20 ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದು ಅಂತಿಮವಾಗಿ ನೇತ್ರಾವತಿ ನದಿ ತಿರುವು ಯೋಜನೆಯ ಬಗ್ಗೆ ಪ್ರಸ್ತುತ ಪಡಿಸಿದ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ‌ ಸ್ಥಾನ ಒದಗಿ ಬಂದಿದೆ.
ದಿಗ್ಗಜ ಸಂಗೀತ ನಿರ್ದೆಶಕರಾದ ಗುರುಕಿರಣ್, ರಂಗ ಕಮಿ ಜಗನ್ ಪವರ್, ನಟ ಸೂರಜ್ ಸನಿಲ್ ತೀರ್ಪುಗಾರರಾಗಿ ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಂಡವು ಅತ್ಯುತ್ತಮ‌ ಪ್ರದರ್ಶನವನ್ನು ನೀಡಿ ಜಯಶಾಲಿಯಾಗಿದೆ.
ಕಲಾ‌ ಸಾಧಕರಾದ ಅನೀಶ್ ಅಮಿನ್ ವೇಣೂರು, ಸ್ಪಿತೇಶ್ ಎಸ್ ಬಾರ್ಯ ನಿರ್ದೇಶನದೊಂದಿಗೆ ಚಂದ್ರಹಾಸ ಬಳಂಜರವರ ಸಹಕಾರದೊಂದಿಗೆ ಯಶಸ್ವಿಯಾಗಿ ಮೂಡಿಬಂದಿರುತ್ತದೆ.

ತಾಲೂಕಿನ ಸುಮಾರು 60 ಜನ ಕಲಾವಿದರಾಗಿ ಭಾಗವಹಿಸಿದ್ದು ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಅಶ್ವಥ್ ಕುಮಾರ್, ಕಾರ್ಯದರ್ಶಿ ಸುನಿಲ್ ಕನ್ಯಾಡಿ , ಕೋಶಾಧಿಕಾರಿ ವಿಜಯ್ ಶಿರ್ಲಾಲು ಹಾಗೂ ಸರ್ವ ಸದಸ್ಯರು ಮತ್ತು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರಿನ‌ ಅಧ್ಯಕ್ಷರಾದ ರಾಜೇಶ್ ಜೊತೆಗಿದ್ದು ಸಂಪೂರ್ಣ ಸಹಕಾರ ನೀಡಿದರು.

Related posts

ಪಾಕ್ ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ

Suddi Udaya

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

Suddi Udaya

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

Suddi Udaya

ಹೃದಯ ಸಮಸ್ಯೆಯಿಂದ ಮೃತಪಟ್ಟ ಬಾಲಕ ಅಶ್ವಿನ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!